‘ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹೆಚ್ಚಿನ ಕೈಗಾರಿಕೆಗಳು ಬಂಡವಾಳ, ಮಾರುಕಟ್ಟೆ ಸಮಸ್ಯೆ ಮತ್ತು ಕಾರ್ಮಿಕರ ಕೊರತೆ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿವೆ. ಇಲ್ಲಿದ್ದ ಕಾರ್ಮಿಕರು ಅವರವರ ರಾಜ್ಯಗಳಗೆ ವಲಸೆ ಹೋಗಿರುವ ಕಾರಣ ಕಾರ್ಮಿಕರ ಕೊರತೆ ಉಂಟಾಗಿದೆ. ಇದರಿಂದ ಕೈಗಾರಿಕಾ ಅಭಿವೃದ್ಧಿ ಕುಂಠಿತವಾಗಿದೆ. ಇದೇ ವೇಳೆ, ಹೊರರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದ 4ಸಾವಿರ ಕಾರ್ಮಿಕರು ಜಿಲ್ಲೆಗೆ ಮರಳಿದ್ದಾರೆ. ಅವರ ವಿದ್ಯಾರ್ಹತೆ, ಕೌಶಲ, ಅನುಭವ ಇತ್ಯಾದಿ ವಿವರಗಳನ್ನು ಜಿಲ್ಲಾ ಪಂಚಾಯಿತಿಯಿಂದ ಕ್ರೋಢೀಕರಿಸಲಾಗಿದೆ’ ಎಂದು ಹೇಳಿದ್ದಾರೆ.