<p><strong>ಬೆಳಗಾವಿ:</strong> ಸಬ್ಸಿಡಿ ಯೋಜನೆಯಡಿ ಕಾರು ಖರೀದಿಸಲು ಮಂಜೂರಾತಿ ದೊರಕಿಸಿಕೊಡುವುದಾಗಿ ಲಂಚ ಪಡೆದಿದ್ದ ಪ್ರವಾಸೋದ್ಯಮ ಇಲಾಖೆಯ ಜವಾನರಾದ ಎಂ.ಪಿ. ದೇವರಾಜ ಮತ್ತು ಮಲ್ಲಿಕಾರ್ಜುನ ದುಂಡಪ್ಪ ಹೆಗಡಿಹಾಳ ಅವರಿಗೆ 4ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ತಲಾ 7 ವರ್ಷ ಜೈಲು ಶಿಕ್ಷೆ ಹಾಗೂ ₹ 17 ಸಾವಿರ ದಂಡ ವಿಧಿಸಿದೆ.</p>.<p>ಇಲಾಖೆಯ ಸಬ್ಸಿಡಿ ಯೋಜನೆಯಡಿ ಕಾರು ಖರೀದಿಸಲು ಮಂಜೂರಾತಿ ದೊರಕಿಸಿಕೊಡಲು 2014ರ ಜುಲೈ 25ರಂದು ಶಿವಾಜಿ ನಿಂಗಪ್ಪ ವನ್ನೂರ ಅವರಿಂದ ₹ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಇವರು ಸಿಕ್ಕಿಬಿದ್ದಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಶಿಧರ ಶೆಟ್ಟಿ ಅವರು, 7 ವರ್ಷ ಜೈಲು ಶಿಕ್ಷೆ ಹಾಗೂ ₹ 17 ಸಾವಿರ ದಂಡ ವಿಧಿಸಿ ಆದೇಶ ನೀಡಿದರು.</p>.<p>ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಠಾಣೆಯ ಅಂದಿನ ಡಿವೈಎಸ್ಪಿ ಜೆ.ಎಂ. ಕರುಣಾಕರಶೆಟ್ಟಿ ಕೈಗೊಂಡಿದ್ದರು. ಸರ್ಕಾರದ ಪರ ಪ್ರವೀಣ ಅಗಸಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಸಬ್ಸಿಡಿ ಯೋಜನೆಯಡಿ ಕಾರು ಖರೀದಿಸಲು ಮಂಜೂರಾತಿ ದೊರಕಿಸಿಕೊಡುವುದಾಗಿ ಲಂಚ ಪಡೆದಿದ್ದ ಪ್ರವಾಸೋದ್ಯಮ ಇಲಾಖೆಯ ಜವಾನರಾದ ಎಂ.ಪಿ. ದೇವರಾಜ ಮತ್ತು ಮಲ್ಲಿಕಾರ್ಜುನ ದುಂಡಪ್ಪ ಹೆಗಡಿಹಾಳ ಅವರಿಗೆ 4ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ತಲಾ 7 ವರ್ಷ ಜೈಲು ಶಿಕ್ಷೆ ಹಾಗೂ ₹ 17 ಸಾವಿರ ದಂಡ ವಿಧಿಸಿದೆ.</p>.<p>ಇಲಾಖೆಯ ಸಬ್ಸಿಡಿ ಯೋಜನೆಯಡಿ ಕಾರು ಖರೀದಿಸಲು ಮಂಜೂರಾತಿ ದೊರಕಿಸಿಕೊಡಲು 2014ರ ಜುಲೈ 25ರಂದು ಶಿವಾಜಿ ನಿಂಗಪ್ಪ ವನ್ನೂರ ಅವರಿಂದ ₹ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಇವರು ಸಿಕ್ಕಿಬಿದ್ದಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಶಿಧರ ಶೆಟ್ಟಿ ಅವರು, 7 ವರ್ಷ ಜೈಲು ಶಿಕ್ಷೆ ಹಾಗೂ ₹ 17 ಸಾವಿರ ದಂಡ ವಿಧಿಸಿ ಆದೇಶ ನೀಡಿದರು.</p>.<p>ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಠಾಣೆಯ ಅಂದಿನ ಡಿವೈಎಸ್ಪಿ ಜೆ.ಎಂ. ಕರುಣಾಕರಶೆಟ್ಟಿ ಕೈಗೊಂಡಿದ್ದರು. ಸರ್ಕಾರದ ಪರ ಪ್ರವೀಣ ಅಗಸಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>