<p><strong>ಮೂಡಲಗಿ:</strong> ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಸೋತ ಹಾಗೂ ಗೆದ್ದ ಅಭ್ಯರ್ಥಿಗಳ ಕುಟುಂಬಸ್ಥರ ಮಹಿಳೆಯರು ದೊಣ್ಣೆಗಳಿಂದ ಬಡಿದಾಡಿಕೊಂಡು, ಪರಸ್ಪರ ಕಲ್ಲು ತೂರಾಡಿ ಹೊಡೆದಾಡಿಕೊಂಡ ಘಟನೆಯ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ತುಕ್ಕಾನಟ್ಟಿ ಗ್ರಾಮದ 4ನೇ ವಾರ್ಡ್ನಲ್ಲಿ ಇಬ್ಬರು ಮಹಿಳೆಯರು ಸ್ಪರ್ಧಿಸಿದ್ದು, ಅದರಲ್ಲಿ ಸುನಂದಾ ಯಮನಪ್ಪ ಭಜಂತ್ರಿ ಗೆಲುವು ಸಾಧಿಸಿದ್ದರು. ಸುರೇಖಾ ಭೀಮಶಿ ಕಂಕಣವಾಡಿ ಎಂಬುವವರು ಸೋತಿದ್ದರು. ಗ್ರಾಮದ 2ನೇ ವಾರ್ಡ್ನಲ್ಲಿ ಈ ಎರಡೂ ಕುಟುಂಬಸ್ಥರು ಒಂದೇ ಬೀದಿಯಲ್ಲಿ ಇರುವುದಿಂದ ಸೋತ ಅಭ್ಯರ್ಥಿಯ ಕುಟುಂಬಸ್ಥರು ಕುಡಿಯುವ ನೀರು ಬರದಂತೆ ನಲ್ಲಿ ಬಂದ್ ಮಾಡಿದ್ದಾರೆ ಎಂದು ಗೆದ್ದ ಅಭ್ಯರ್ಥಿ ಸುನಂದಾ ಕುಟುಂಬಸ್ಥರು ಆರೋಪಿಸಿದ್ದರು. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ.</p>.<p>ಗೆದ್ದ ಅಭ್ಯರ್ಥಿ ಸುನಂದಾ ಕುಟುಂಬಸ್ಥರ ಮೇಲೆ ಸೋತ ಅಭ್ಯರ್ಥಿಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಶನಿವಾರ ಸಂಜೆ ಈ ಘಟನೆ ನಡೆದಿದ್ದು ಘಟಪ್ರಭಾ ಪೊಲೀಸರು ಬಂದು ಪರಿಸ್ಥಿತಿ ಶಾಂತಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ:</strong> ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಸೋತ ಹಾಗೂ ಗೆದ್ದ ಅಭ್ಯರ್ಥಿಗಳ ಕುಟುಂಬಸ್ಥರ ಮಹಿಳೆಯರು ದೊಣ್ಣೆಗಳಿಂದ ಬಡಿದಾಡಿಕೊಂಡು, ಪರಸ್ಪರ ಕಲ್ಲು ತೂರಾಡಿ ಹೊಡೆದಾಡಿಕೊಂಡ ಘಟನೆಯ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ತುಕ್ಕಾನಟ್ಟಿ ಗ್ರಾಮದ 4ನೇ ವಾರ್ಡ್ನಲ್ಲಿ ಇಬ್ಬರು ಮಹಿಳೆಯರು ಸ್ಪರ್ಧಿಸಿದ್ದು, ಅದರಲ್ಲಿ ಸುನಂದಾ ಯಮನಪ್ಪ ಭಜಂತ್ರಿ ಗೆಲುವು ಸಾಧಿಸಿದ್ದರು. ಸುರೇಖಾ ಭೀಮಶಿ ಕಂಕಣವಾಡಿ ಎಂಬುವವರು ಸೋತಿದ್ದರು. ಗ್ರಾಮದ 2ನೇ ವಾರ್ಡ್ನಲ್ಲಿ ಈ ಎರಡೂ ಕುಟುಂಬಸ್ಥರು ಒಂದೇ ಬೀದಿಯಲ್ಲಿ ಇರುವುದಿಂದ ಸೋತ ಅಭ್ಯರ್ಥಿಯ ಕುಟುಂಬಸ್ಥರು ಕುಡಿಯುವ ನೀರು ಬರದಂತೆ ನಲ್ಲಿ ಬಂದ್ ಮಾಡಿದ್ದಾರೆ ಎಂದು ಗೆದ್ದ ಅಭ್ಯರ್ಥಿ ಸುನಂದಾ ಕುಟುಂಬಸ್ಥರು ಆರೋಪಿಸಿದ್ದರು. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ.</p>.<p>ಗೆದ್ದ ಅಭ್ಯರ್ಥಿ ಸುನಂದಾ ಕುಟುಂಬಸ್ಥರ ಮೇಲೆ ಸೋತ ಅಭ್ಯರ್ಥಿಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಶನಿವಾರ ಸಂಜೆ ಈ ಘಟನೆ ನಡೆದಿದ್ದು ಘಟಪ್ರಭಾ ಪೊಲೀಸರು ಬಂದು ಪರಿಸ್ಥಿತಿ ಶಾಂತಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>