‘ಅವಿಶ್ವಾಸ ನಿರ್ಣಯ ಮಂಡಿಸಿದ್ದರಿಂದ ಆಕ್ರೋಶಗೊಂಡಿದ್ದ ಪಂಚಾಯ್ತಿ ಅಧ್ಯಕ್ಷ ಶಿವಪ್ಪ ರಾಯಪ್ಪ ವಣ್ಣೂರ, ಇದಕ್ಕೆ ಬನ್ನೆಪ್ಪ ಕಾರಣವೆಂದು 15 ಜನರ ಗುಂಪು ಕಟ್ಟಿಕೊಂಡು ಗುರುವಾರ ತಡರಾತ್ರಿ ಕೊಡಲಿ, ಕಬ್ಬಿಣದ ರಾಡು ಮೊದಲಾದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜಗಳ ಬಿಡಿಸಲು ಬಂದ ಇಬ್ಬರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಅಧ್ಯಕ್ಷರನ್ನು ಪ್ರಮುಖ ಆರೋಪಿಯನ್ನಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಕಾಕತಿ ಠಾಣೆ ಪೊಲೀಸರು ಮಾಹಿತಿ ನೀಡಿದರು.