<p><strong>ಬೆಳಗಾವಿ:</strong> ‘ಒಲಿಂಪಿಕ್ಸ್ನಲ್ಲಿ ದೇಶಕ್ಕಾಗಿ ಪದಕ ಗಳಿಸುವುದು ನನ್ನ ಗುರಿಯಾಗಿದೆ. ಅಲ್ಲಿ ಪದಕ ಗೆದ್ದೇ ಗೆಲ್ಲುತ್ತೇನೆ’ ಎಂದು ಏಷ್ಯನ್ ಗೇಮ್ಸ್ನ ಕುರಾಶ್ ಕ್ರೀಡೆಯ 52 ಕೆ.ಜಿ. ವಿಭಾಗದಲ್ಲಿ ಕಂಚು ತಮ್ಮದಾಗಿಸಿಕೊಂಡ ಮಲಪ್ರಭಾ ಜಾಧವ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಜಕಾರ್ತಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಪದಕ ಗಳಿಸಿದ ಬಳಿಕ ನಗರಕ್ಕೆ ಬಂದ ಅವರು, ಪ್ರವಾಸಿಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕ್ರೀಡಾ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಕುರಾಶ್ ಜುಡೋ ಮಾದರಿಯ ಕ್ರೀಡೆ ಆಗಿದೆ. ಈ ಆಟದಲ್ಲಿ ದೇಶವನ್ನು ಪ್ರತಿನಿಧಿಸಿ ಭಾಗವಹಿಸಿ, ಕಂಚಿನ ಪದಕ ಗೆದ್ದಿರುವುದಕ್ಕೆ ತುಂಬಾ ಖುಷಿಯಾಗಿದೆ. ಒಲಿಂಪಿಕ್ಸ್ ಸೇರಿದಂತೆ ಮುಂದಿನ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ನೀಡಲು ಪೂರಕವಾಗಿ ತರಬೇತಿ ಪಡೆಯುತ್ತೇನೆ, ಪರಿಶ್ರಮ ಹಾಕುತ್ತೇನೆ’ ಎಂದರು.</p>.<p class="Subhead"><strong>ಜುಡೋ ಅಕಾಡೆಮಿ ಅಗತ್ಯ:</strong></p>.<p>‘ಬೆಳಗಾವಿಯಲ್ಲಿ ಜುಡೋ ಹಾಗೂ ಕುರಾಶ್ ಕ್ರೀಡೆಯಲ್ಲಿ ಸಾಧನೆ ಮಾಡುವಂತಹ ಅನೇಕ ಕ್ರೀಡಾಪಟುಗಳಿದ್ದಾರೆ. ಅವರಿಗೆ ಪ್ರೋತ್ಸಾಹ ನೀಡಲು ಜುಡೋ ಅಕಾಡೆಮಿ ಸ್ಥಾಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು’ ಎಂದು ಕೋರಿದರು.</p>.<p>ಮಲಪ್ರಭಾ ಜಾಧವ ಅವರನ್ನು ಸನ್ಮಾನಿಸಿದ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ‘ಈಕೆಯ ಸಾಧನೆಯು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಪೊಲೀಸ್ ಕಮೀಷನರೇಟ್ ವತಿಯಿಂದ ₹ 10ಸಾವಿರ ಬಹುಮಾನ ನೀಡಲಾಗುವುದು’ ಎಂದು ಪ್ರಕಟಿಸಿದರು.</p>.<p>ಎಸ್ಪಿ ಸುಧೀರ್ಕುಮಾರ್ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ ಸನ್ಮಾನಿಸಿದರು.</p>.<p class="Subhead"><strong>ಬಹಳ ಅವಕಾಶ:</strong></p>.<p>ತರಬೇತುದಾರ ಜಿತೇಂದ್ರಸಿಂಗ್ ಮಾತನಾಡಿ, ‘ಬೆಳಗಾವಿಯಲ್ಲಿ ಜುಡೋ ಹಾಗೂ ಕುರಾಶ್ ಕ್ರೀಡೆ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ. ಅಗತ್ಯ ಸೌಲಭ್ಯ ಒದಗಿಸಿದರೆ ಮಲಪ್ರಭಾ ಮತ್ತಿತರ ಕ್ರೀಡಾಪಟುಗಳು ಉತ್ತಮ ತರಬೇತಿ ಪಡೆದು ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಬಲ್ಲರು. ದೇಶ ಹಾಗೂ ಬೆಳಗಾವಿಯ ಹೆಸರನ್ನು ಬೆಳಗಿಸುವರು. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಾಗಿದೆ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ, ಪ್ರವಾಸಿಮಂದಿರಕ್ಕೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಕೂಡ ಮಲಪ್ರಭಾಗೆ ಅಭಿನಂದನೆ ಸಲ್ಲಿಸಿದರು. ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಕ್ರೀಡಾ ಶಾಲೆಯ ಕ್ರೀಡಾಪಟುಗಳು, ತುರುಮುರಿಯ ಮುಖಂಡರು ಅಭಿನಂದಿಸಿದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ ನಿರೂಪಿಸಿದರು.</p>.<p>ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಬಂದ ಮಲಪ್ರಭಾ ಜಾಧವ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡು, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದ ಬಳಿಕ ಅವರ ಊರು ತುರಮುರಿಗೆ ಬೀಳ್ಕೊಡಲಾಯಿತು. ಅಲ್ಲೂ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಒಲಿಂಪಿಕ್ಸ್ನಲ್ಲಿ ದೇಶಕ್ಕಾಗಿ ಪದಕ ಗಳಿಸುವುದು ನನ್ನ ಗುರಿಯಾಗಿದೆ. ಅಲ್ಲಿ ಪದಕ ಗೆದ್ದೇ ಗೆಲ್ಲುತ್ತೇನೆ’ ಎಂದು ಏಷ್ಯನ್ ಗೇಮ್ಸ್ನ ಕುರಾಶ್ ಕ್ರೀಡೆಯ 52 ಕೆ.ಜಿ. ವಿಭಾಗದಲ್ಲಿ ಕಂಚು ತಮ್ಮದಾಗಿಸಿಕೊಂಡ ಮಲಪ್ರಭಾ ಜಾಧವ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಜಕಾರ್ತಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಪದಕ ಗಳಿಸಿದ ಬಳಿಕ ನಗರಕ್ಕೆ ಬಂದ ಅವರು, ಪ್ರವಾಸಿಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕ್ರೀಡಾ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಕುರಾಶ್ ಜುಡೋ ಮಾದರಿಯ ಕ್ರೀಡೆ ಆಗಿದೆ. ಈ ಆಟದಲ್ಲಿ ದೇಶವನ್ನು ಪ್ರತಿನಿಧಿಸಿ ಭಾಗವಹಿಸಿ, ಕಂಚಿನ ಪದಕ ಗೆದ್ದಿರುವುದಕ್ಕೆ ತುಂಬಾ ಖುಷಿಯಾಗಿದೆ. ಒಲಿಂಪಿಕ್ಸ್ ಸೇರಿದಂತೆ ಮುಂದಿನ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ನೀಡಲು ಪೂರಕವಾಗಿ ತರಬೇತಿ ಪಡೆಯುತ್ತೇನೆ, ಪರಿಶ್ರಮ ಹಾಕುತ್ತೇನೆ’ ಎಂದರು.</p>.<p class="Subhead"><strong>ಜುಡೋ ಅಕಾಡೆಮಿ ಅಗತ್ಯ:</strong></p>.<p>‘ಬೆಳಗಾವಿಯಲ್ಲಿ ಜುಡೋ ಹಾಗೂ ಕುರಾಶ್ ಕ್ರೀಡೆಯಲ್ಲಿ ಸಾಧನೆ ಮಾಡುವಂತಹ ಅನೇಕ ಕ್ರೀಡಾಪಟುಗಳಿದ್ದಾರೆ. ಅವರಿಗೆ ಪ್ರೋತ್ಸಾಹ ನೀಡಲು ಜುಡೋ ಅಕಾಡೆಮಿ ಸ್ಥಾಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು’ ಎಂದು ಕೋರಿದರು.</p>.<p>ಮಲಪ್ರಭಾ ಜಾಧವ ಅವರನ್ನು ಸನ್ಮಾನಿಸಿದ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ‘ಈಕೆಯ ಸಾಧನೆಯು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಪೊಲೀಸ್ ಕಮೀಷನರೇಟ್ ವತಿಯಿಂದ ₹ 10ಸಾವಿರ ಬಹುಮಾನ ನೀಡಲಾಗುವುದು’ ಎಂದು ಪ್ರಕಟಿಸಿದರು.</p>.<p>ಎಸ್ಪಿ ಸುಧೀರ್ಕುಮಾರ್ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ ಸನ್ಮಾನಿಸಿದರು.</p>.<p class="Subhead"><strong>ಬಹಳ ಅವಕಾಶ:</strong></p>.<p>ತರಬೇತುದಾರ ಜಿತೇಂದ್ರಸಿಂಗ್ ಮಾತನಾಡಿ, ‘ಬೆಳಗಾವಿಯಲ್ಲಿ ಜುಡೋ ಹಾಗೂ ಕುರಾಶ್ ಕ್ರೀಡೆ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ. ಅಗತ್ಯ ಸೌಲಭ್ಯ ಒದಗಿಸಿದರೆ ಮಲಪ್ರಭಾ ಮತ್ತಿತರ ಕ್ರೀಡಾಪಟುಗಳು ಉತ್ತಮ ತರಬೇತಿ ಪಡೆದು ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಬಲ್ಲರು. ದೇಶ ಹಾಗೂ ಬೆಳಗಾವಿಯ ಹೆಸರನ್ನು ಬೆಳಗಿಸುವರು. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಾಗಿದೆ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ, ಪ್ರವಾಸಿಮಂದಿರಕ್ಕೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಕೂಡ ಮಲಪ್ರಭಾಗೆ ಅಭಿನಂದನೆ ಸಲ್ಲಿಸಿದರು. ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಕ್ರೀಡಾ ಶಾಲೆಯ ಕ್ರೀಡಾಪಟುಗಳು, ತುರುಮುರಿಯ ಮುಖಂಡರು ಅಭಿನಂದಿಸಿದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ ನಿರೂಪಿಸಿದರು.</p>.<p>ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಬಂದ ಮಲಪ್ರಭಾ ಜಾಧವ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡು, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದ ಬಳಿಕ ಅವರ ಊರು ತುರಮುರಿಗೆ ಬೀಳ್ಕೊಡಲಾಯಿತು. ಅಲ್ಲೂ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>