ಬೆಳಗಾವಿ: ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಮಹಾದೇವ ಮಂದಿರದ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಮ್ಮ ನಿಧಿಯಿಂದ ₹ 10 ಲಕ್ಷ ಅನುದಾನ ನೀಡಿದ್ದಾರೆ.
ಈ ಪೈಕಿ ಮೊದಲ ಕಂತಿನಲ್ಲಿ ₹ 5.40 ಲಕ್ಷ ಚೆಕ್ ಅನ್ನು ಹೆಬ್ಬಾಳಕರ ದೇವಸ್ಥಾನ ಸಮಿತಿಯ ಮುಖಂಡರಿಗೆ ಹಸ್ತಾಂತರಿಸಿದರು.
‘ಗ್ರಾಮಸ್ಥರಿಗೆ ನೀಡಿದ್ದ ಭರವಸೆ ಈಡೇರಿಸಿದ್ದೇನೆ. ನಾನು ನೀಡಿದ ಯಾವ ಭರವಸೆಯೂ ಹುಸಿ ಆಗುವುದಿಲ್ಲ. ಜನರು ನನ್ನ ಮೇಲಿಟ್ಟಿರುವ ವಿಶ್ವಾಸದಿಂದಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ಕೆಲಸ ಮುಂದುವರಿಸಿದ್ದೇನೆ’ ಎಂದು ತಿಳಿಸಿದರು.
ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.