<p><strong>ಬೆಳಗಾವಿ</strong>: ‘ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p><p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹1,000, ಸಹಾಯಕಿಯರ ಗೌರವಧನವನ್ನು ₹750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ’ ಎಂದರು.</p><p>ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಬ್ಬಾಳಕರ, ‘ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ’ ಎಂದರು.</p><p>‘ಘರ್ಜಿಸುವ ಹುಲಿಗಳನ್ನೇ ಈಗ ಟಾರ್ಗೆಟ್ ಮಾಡಿ ಹೆದರಿಸಲಾಗುತ್ತಿದೆ’ ಎಂಬ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ, ‘ಈ ಬಗ್ಗೆ ಸತೀಶ ಅವರನ್ನೇ ಕೇಳಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p><p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹1,000, ಸಹಾಯಕಿಯರ ಗೌರವಧನವನ್ನು ₹750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ’ ಎಂದರು.</p><p>ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಬ್ಬಾಳಕರ, ‘ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ’ ಎಂದರು.</p><p>‘ಘರ್ಜಿಸುವ ಹುಲಿಗಳನ್ನೇ ಈಗ ಟಾರ್ಗೆಟ್ ಮಾಡಿ ಹೆದರಿಸಲಾಗುತ್ತಿದೆ’ ಎಂಬ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ, ‘ಈ ಬಗ್ಗೆ ಸತೀಶ ಅವರನ್ನೇ ಕೇಳಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>