<p><strong>ಬೆಳಗಾವಿ</strong>: ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹16 ಕೋಟಿ ಜಿಎಸ್ಟಿ ವಂಚಿಸಿದ ಆರೋಪಿಯನ್ನು ಕೇಂದ್ರ ಜಿಎಸ್ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಯಾವುದೇ ಅಧಿಕೃತ ವ್ಯವಹಾರ ಮಾಡದೇ ಕೋಟ್ಯಂತರ ರೂಪಾಯಿ ವ್ಯವಹಾರದ ಇನ್ವಾಯ್ಸ್ಗಳನ್ನು ಸೃಷ್ಟಿ ಮಾಡಿದ್ದು ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಕಂಪನಿಗಳು ಇವೆ ಎಂದು ನಮೂದಾಗಿದ್ದ ಬಳ್ಳಾರಿಯ ಮೂರು ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿತು.</p>.<p>ಈ ಆರೋಪಿ ವಿವಿಧ ಹೆಸರುಗಳಲ್ಲಿ ನಕಲಿ ಕಂಪನಿಗಳ ದಾಖಲೆ ಸೃಷ್ಟಿಸಿ, ವ್ಯವಹಾರ ನಡೆಸಿದ ಹಾಗೆ ಇನ್ವಾಯ್ಸ್ಗಳನ್ನು ಸಿದ್ಧಪಡಿಸಿ, ನಕಲಿ ಒಪ್ಪಂದ, ನಕಲಿ ಬಿಲ್ಗಳನ್ನು ಸೃಷ್ಟಿಸಿದ್ದಾನೆ. ಇದಕ್ಕಾಗಿ ತನ್ನ ಕಚೇರಿಯ ನೌಕರರ ಆಧಾರ್ ಕಾರ್ಡ್, ಪಾನ್ ಕಾರ್ಡ್ಗಳನ್ನು ಬಳಸಿಕೊಂಡಿದ್ದಾನೆ. </p>.<p>ಒಟ್ಟು ₹16 ಕೋಟಿ ಮೌಲ್ಯದ ಇನ್ಪುಟ್ ಟ್ಯಾಕ್ಟ್ ಕ್ರೆಡಿಟ್ ಪಡೆದಿದ್ದಾನೆ. ಸದ್ಯ ಬಂಧಿಸಲಾದ ಆರೋಪಿ ಈ ಪ್ರಕರಣದ ‘ಪ್ರಮುಖ ಸೂತ್ರಧಾರ’ ಆಗಿದ್ದು, ಇನ್ನುಳಿದ ಆರೋಪಿಗಳನ್ನೂ ಬಂಧಿಸಲಾಗುವುದು. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಎಸ್ಟಿ ಕಚೇರಿಯ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹16 ಕೋಟಿ ಜಿಎಸ್ಟಿ ವಂಚಿಸಿದ ಆರೋಪಿಯನ್ನು ಕೇಂದ್ರ ಜಿಎಸ್ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಯಾವುದೇ ಅಧಿಕೃತ ವ್ಯವಹಾರ ಮಾಡದೇ ಕೋಟ್ಯಂತರ ರೂಪಾಯಿ ವ್ಯವಹಾರದ ಇನ್ವಾಯ್ಸ್ಗಳನ್ನು ಸೃಷ್ಟಿ ಮಾಡಿದ್ದು ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಕಂಪನಿಗಳು ಇವೆ ಎಂದು ನಮೂದಾಗಿದ್ದ ಬಳ್ಳಾರಿಯ ಮೂರು ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿತು.</p>.<p>ಈ ಆರೋಪಿ ವಿವಿಧ ಹೆಸರುಗಳಲ್ಲಿ ನಕಲಿ ಕಂಪನಿಗಳ ದಾಖಲೆ ಸೃಷ್ಟಿಸಿ, ವ್ಯವಹಾರ ನಡೆಸಿದ ಹಾಗೆ ಇನ್ವಾಯ್ಸ್ಗಳನ್ನು ಸಿದ್ಧಪಡಿಸಿ, ನಕಲಿ ಒಪ್ಪಂದ, ನಕಲಿ ಬಿಲ್ಗಳನ್ನು ಸೃಷ್ಟಿಸಿದ್ದಾನೆ. ಇದಕ್ಕಾಗಿ ತನ್ನ ಕಚೇರಿಯ ನೌಕರರ ಆಧಾರ್ ಕಾರ್ಡ್, ಪಾನ್ ಕಾರ್ಡ್ಗಳನ್ನು ಬಳಸಿಕೊಂಡಿದ್ದಾನೆ. </p>.<p>ಒಟ್ಟು ₹16 ಕೋಟಿ ಮೌಲ್ಯದ ಇನ್ಪುಟ್ ಟ್ಯಾಕ್ಟ್ ಕ್ರೆಡಿಟ್ ಪಡೆದಿದ್ದಾನೆ. ಸದ್ಯ ಬಂಧಿಸಲಾದ ಆರೋಪಿ ಈ ಪ್ರಕರಣದ ‘ಪ್ರಮುಖ ಸೂತ್ರಧಾರ’ ಆಗಿದ್ದು, ಇನ್ನುಳಿದ ಆರೋಪಿಗಳನ್ನೂ ಬಂಧಿಸಲಾಗುವುದು. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಎಸ್ಟಿ ಕಚೇರಿಯ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>