‘ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಆರೋಪಿಯನ್ನು ಜ. 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಂಗಳೂರಿನ ಆ ಕಂಪನಿಯು ಪುಣೆಯಲ್ಲಿ ಕಾರ್ಪೊರೇಟ್ ಕಚೇರಿ ಹೊಂದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಜಿಎಸ್ಟಿ ನೋಂದಾಯಿಸಿದೆ. ರಸ್ತೆ ನಿರ್ಮಾಣ, ನೀರಾವರಿ ಮೊದಲಾದ ಯೋಜನೆಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಬೆಳಗಾವಿಯ ಜಿಎಸ್ಟಿ ಜಾಗೃತ ದಳದ ಅಧಿಕಾರಿಗಳು ಅದರ ಕಾರ್ಯನಿರ್ವಹಣೆ, ತೆರಿಗೆ ವಹಿವಾಟು, ಪಾವತಿ ಬಗ್ಗೆ ವಿಚಾರಣೆ ನಡೆಸಿದಾಗ ತರಿಗೆ ವಂಚನೆಯ ವಿಷಯ ತಿಳಿದುಬಂದಿದೆ’ ಎಂದು ಜಿಎಸ್ಟಿ ಜಾಗೃತ ದಳದ ಪ್ರಧಾನ ಹೆಚ್ಚುವರಿ ನಿರ್ದೇಶಕ ಜೇನ್ ಕರುಣ ನಾಥನೆಲ್ ತಿಳಿಸಿದ್ದಾರೆ.