ನಿಪ್ಪಾಣಿ: ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಹಿತಚಿಂತಕರಾದ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಅವರ ಮಾರ್ಗದರ್ಶನದಲ್ಲಿ ಆಡಳಿತ ಮಂಡಳಿ ಕೈಕೊಂಡ ನಿರ್ಣಯದಂತೆ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಪ್ರತಿ ಟನ್ ಕಬ್ಬಿಗೆ ₹ 3 ಸಾವಿರದಂತೆ ಕಬ್ಬಿನ ಬೆಲೆಯನ್ನು ನೇರವಾಗಿ ಪಾವತಿಸಲು ನಿರ್ಣಯಿಸಲಾಗಿದೆ ಎಂದು ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ ತಿಳಿಸಿದ್ದಾರೆ.