ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ನಾಡಿನ ಜ್ಞಾನದ ದೇಗುಲವಾಗಬೇಕಿದ್ದ ಕನ್ನಡ ವಿಶ್ವವಿದ್ಯಾಲಯ ಈಗ ಭ್ರಷ್ಟಾಚಾರದ ಕೂಪವಾಗಿದೆ. ಪ್ರಾಧ್ಯಾಪಕರ ನೇಮಕಾತಿಯಿಂದ ನಿವೃತ್ತಿ ಸೌಲಭ್ಯ ಬಿಡುಗಡೆಯವರೆಗೆ ಎಲ್ಲ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇಷತನ ಮಂಜೂರು ಮಾಡುವುದಕ್ಕೂ ಲಂಚ ಕೇಳುತ್ತಿರುವ ಆರೋಪ ಇದೆ. ಕನ್ನಡ ವಿಶ್ವವಿದ್ಯಾಲಯ ಇಂತಹ ಸ್ಥಿತಿ ತಲುಪಿರುವುದು ದುರದೃಷ್ಟಕರ’ ಎಂದರು.