ಬೆಳಗಾವಿ: ‘ಆಜಾನ್ ಮೂಲಕ ಆಗುತ್ತಿರುವ ಶಬ್ದಮಾಲಿನ್ಯ ತಡೆಯಬೇಕು. ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಒತ್ತಾಯಿಸಿ ಅಭಿಯಾನ ನಡೆಸುತ್ತಿರುವ ಶ್ರೀರಾಮ ಸೇನೆ ಕಾರ್ಯಕರ್ತರು, ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಹನುಮಾನ ಮಂದಿರದಲ್ಲಿ ಸೋಮವಾರ ಮುಂಜಾನೆ ಹನುಮಾನ ಚಾಲೀಸಾ ಪಠಿಸಿದರು.