ಏಕಾಂಗಿಯಾಗಿ ಧರಣಿ ನಡೆಸುತ್ತಿರುವ ಅವರು, ‘ಹೋದ ವರ್ಷದ ಆಗಸ್ಟ್ನಲ್ಲಿ ಬಂದ ನೆರೆಯಿಂದಾಗಿ ಇಡೀ ದರೂರ ಗ್ರಾಮ ಮುಳುಗಡೆಯಾಗಿತ್ತು. 258 ಮನೆಗಳು ನೆಲಸಮವಾಗಿದ್ದವು. ಗ್ರಾಮಕ್ಕೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲ ಮನೆಗಳಿಗೂ ಪರಿಹಾರ ಕೊಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಆರು ತಿಂಗಳುಗಳಾಗುತ್ತಾ ಬಂದಿದ್ದರೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ, ಸತ್ಯಾಗ್ರಹ ನಡೆಸಬೇಕಾಯಿತು’ ಎಂದು ತಿಳಿಸಿದರು.