<p><strong>ಹಂದಿಗುಂದ:</strong> ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ. ನಾಲ್ಕು ದಿನಗಳಿಂದ ಇದನ್ನು ಪಾಲಿಸಲಾಗುತ್ತಿದೆ.</p>.<p>‘ಗ್ರಾಮಸ್ಥರ ಸಹಕಾರದಿಂದ ಇದು ಸಾಧ್ಯವಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮಹಾದೇವ ನಾಯಕ ತಿಳಿಸಿದ್ದಾರೆ. ಪಿಡಿಒ ಬಿ.ಎಸ್. ನಾಗನೂರ, ಎಸ್ಡಿಎಂಸಿ ಅಧ್ಯಕ್ಷ ಗುರು ಅಂಗಡಿ ಮತ್ತು ಮುಖ್ಯ ಶಿಕ್ಷಕ ಪಿ.ಎಂ. ದಿವಾಕರ ಸಮ್ಮತಿಸಿದ್ದಾರೆ.</p>.<p>‘ಕಪ್ಪಲಗುದ್ದಿಯಲ್ಲಿ ಸರ್ಕಾರಿ ಮಾದರಿ ಶಾಲೆ ಮತ್ತು ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಇದೆ. ಪಿಯು ಮತ್ತು ಪದವಿ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಬೇರೆ ಪಟ್ಟಣಗಳಿಗೆ ಹೋಗುತ್ತಾರೆ. ಮನೆಯಲ್ಲೇ ಓದಲಿ ಎಂಬುದು ಇದರ ಉದ್ದೇಶ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>‘ಬೆಳಗಾವಿ ತಾಲ್ಲೂಕಿನ ಹಲಗಾದಲ್ಲಿ ತಿಂಗಳ ಹಿಂದೆ ಇಂಥ ಯತ್ನ ನಡೆದಿತ್ತು. ಅವರಿಂದ ಕಪ್ಪಲಗುದ್ದಿ ಗ್ರಾಮಸ್ಥರು ಪ್ರೇರಣೆ ಪಡೆದಿದ್ದಾರೆ. ಖುದ್ದು ಪರಿಶೀಲಿಸಿದ್ದೇನೆ. ಇದು ಒಳ್ಳೆಯ ಪ್ರಯತ್ನ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂದಿಗುಂದ:</strong> ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ. ನಾಲ್ಕು ದಿನಗಳಿಂದ ಇದನ್ನು ಪಾಲಿಸಲಾಗುತ್ತಿದೆ.</p>.<p>‘ಗ್ರಾಮಸ್ಥರ ಸಹಕಾರದಿಂದ ಇದು ಸಾಧ್ಯವಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮಹಾದೇವ ನಾಯಕ ತಿಳಿಸಿದ್ದಾರೆ. ಪಿಡಿಒ ಬಿ.ಎಸ್. ನಾಗನೂರ, ಎಸ್ಡಿಎಂಸಿ ಅಧ್ಯಕ್ಷ ಗುರು ಅಂಗಡಿ ಮತ್ತು ಮುಖ್ಯ ಶಿಕ್ಷಕ ಪಿ.ಎಂ. ದಿವಾಕರ ಸಮ್ಮತಿಸಿದ್ದಾರೆ.</p>.<p>‘ಕಪ್ಪಲಗುದ್ದಿಯಲ್ಲಿ ಸರ್ಕಾರಿ ಮಾದರಿ ಶಾಲೆ ಮತ್ತು ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಇದೆ. ಪಿಯು ಮತ್ತು ಪದವಿ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಬೇರೆ ಪಟ್ಟಣಗಳಿಗೆ ಹೋಗುತ್ತಾರೆ. ಮನೆಯಲ್ಲೇ ಓದಲಿ ಎಂಬುದು ಇದರ ಉದ್ದೇಶ’ ಎಂದು ಗ್ರಾಮಸ್ಥರು ತಿಳಿಸಿದರು.</p>.<p>‘ಬೆಳಗಾವಿ ತಾಲ್ಲೂಕಿನ ಹಲಗಾದಲ್ಲಿ ತಿಂಗಳ ಹಿಂದೆ ಇಂಥ ಯತ್ನ ನಡೆದಿತ್ತು. ಅವರಿಂದ ಕಪ್ಪಲಗುದ್ದಿ ಗ್ರಾಮಸ್ಥರು ಪ್ರೇರಣೆ ಪಡೆದಿದ್ದಾರೆ. ಖುದ್ದು ಪರಿಶೀಲಿಸಿದ್ದೇನೆ. ಇದು ಒಳ್ಳೆಯ ಪ್ರಯತ್ನ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>