<p><strong>ಹಿರೇಬಾಗೇವಾಡಿ</strong>: ಪ್ರತಿಯೊಬ್ಬ ಹಿಂದೂ ಒಗ್ಗಟ್ಟಾಗುವ ಮೂಲಕ ಧರ್ಮ ರಕ್ಷಣೆಗೆ ಮುಂದಾಗಬೇಕು ಎಂದು ವಾಗ್ಮಿ ಹಾರಿಕಾ ಮಂಜುನಾಥ ಅವರು ಹೇಳಿದರು.</p>.<p>ಗ್ರಾಮದಲ್ಲಿ ಗುರುವಾರ ಜರುಗಿದ ‘ವಿರಾಟ ಹಿಂದೂ ಸಮಾವೇಶ’ ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪೂರ್ವಿಕರ ಶ್ರಮ ಹಾಗೂ ಬಲಿದಾನದಿಂದಾಗಿ ಸನಾತನ ಹಿಂದೂ ಧರ್ಮವು ಇನ್ನೂ ಜೀವಂತವಿದ್ದು ಅದರ ಪಾಲನೆ ಮಾಡಬೇಕಾದದ್ದು ಎಲ್ಲರ ಕರ್ತವ್ಯ ಎಂದರು.</p>.<p>ಆರ್ಎಸ್ಎಸ್ ಪ್ರಮುಖರಾದ ರಾಮಚಂದ್ರ ಎಡಕೆ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಇಂದಿನ ಯುವ ಪೀಳಿಗೆ ನಮ್ಮ ಸಂಸ್ಕೃತಿ ಮರೆಯುತ್ತಿದ್ದು ಧರ್ಮ ಹಾಗೂ ಸಂಸ್ಕೃತಿಯ ಉಳವಿಗಾಗಿ ಯುವಕರ ಪ್ರಯತ್ನ ಅಗತ್ಯವಿದೆ ಎಂದರು.</p>.<p>ಅರಳೀಕಟ್ಟಿ ತೋಂಟೇಶ್ವಬರ ವಿರಕ್ತ ಮಠದ ಶಿವಮೂರ್ತಿ ಸ್ವಾಮಿಗಳು, ತಾರೀಹಾಳದ ಅಡವೀಶ ದೇವರು, ಹೊನ್ನಿಹಾಳದ ಬಸವರಾಜ ದೇವರು ಮಾತನಾಡಿದರು.</p>.<p>ಹಿರೇಬಾಗೇವಾಡಿ ವಿರಾಟ ಹಿಂದೂ ಸಮಾವೇಶ ಸಮಿತಿಯ ಅಧ್ಯಕ್ಷ ಈರಣ್ಣ ರೊಟ್ಟಿ, ಗೌರವಾಧ್ಯಕ್ಷ ರಮೇಶಗೌಡ ಪಾಟೀಲ, ರಾಮಚಂದ್ರ ಏಡಕೆ, ನಾಗೇಂದ್ರ ಸ್ವಾಮಿಗಳು, ಶಿವಮೂರ್ತಿ ಸ್ವಾಮಿಗಳು, ಅಡವೀಶ ದೇವರು, ಬಸವರಾಜ ದೇವರು, ಬಡಾಲ ಅಂಕಲಗಿಯ ರಾಚಯ್ಯ ಸ್ವಾಮಿಗಳು, ಜಾಲಿಕರೆಮ್ಮ ದೇವಸ್ಥಾನದ ಉಳವಪ್ಪಜ್ಜ ವೇದಿಕೆಯಲ್ಲಿದ್ದರು.</p>.<p><strong>ಶೋಭಾ ಯಾತ್ರೆ</strong>: ಸಮಾವೇಶದ ನಿಮಿತ್ತ ಭವ್ಯ ಶೋಭಾಯಾತ್ರೆಯು ಇಲ್ಲಿನ ಬಸವ ವೃತ್ತದಿಂದ ಆರಂಭಗೊಂಡು ಬೈಲಹೊಂಗಲ ರಸ್ತೆ ಮಾರ್ಗವಾಗಿ ಪಡಿಬಸವೇಶ್ವರ ದೇವಸ್ಥಾನದ ಬಳಿಯ ಕಾರ್ಯಕ್ರಮದ ವೇದಿಕೆಯಲ್ಲಿ ಕೊನೆಗೊಂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಬಾಗೇವಾಡಿ</strong>: ಪ್ರತಿಯೊಬ್ಬ ಹಿಂದೂ ಒಗ್ಗಟ್ಟಾಗುವ ಮೂಲಕ ಧರ್ಮ ರಕ್ಷಣೆಗೆ ಮುಂದಾಗಬೇಕು ಎಂದು ವಾಗ್ಮಿ ಹಾರಿಕಾ ಮಂಜುನಾಥ ಅವರು ಹೇಳಿದರು.</p>.<p>ಗ್ರಾಮದಲ್ಲಿ ಗುರುವಾರ ಜರುಗಿದ ‘ವಿರಾಟ ಹಿಂದೂ ಸಮಾವೇಶ’ ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪೂರ್ವಿಕರ ಶ್ರಮ ಹಾಗೂ ಬಲಿದಾನದಿಂದಾಗಿ ಸನಾತನ ಹಿಂದೂ ಧರ್ಮವು ಇನ್ನೂ ಜೀವಂತವಿದ್ದು ಅದರ ಪಾಲನೆ ಮಾಡಬೇಕಾದದ್ದು ಎಲ್ಲರ ಕರ್ತವ್ಯ ಎಂದರು.</p>.<p>ಆರ್ಎಸ್ಎಸ್ ಪ್ರಮುಖರಾದ ರಾಮಚಂದ್ರ ಎಡಕೆ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಇಂದಿನ ಯುವ ಪೀಳಿಗೆ ನಮ್ಮ ಸಂಸ್ಕೃತಿ ಮರೆಯುತ್ತಿದ್ದು ಧರ್ಮ ಹಾಗೂ ಸಂಸ್ಕೃತಿಯ ಉಳವಿಗಾಗಿ ಯುವಕರ ಪ್ರಯತ್ನ ಅಗತ್ಯವಿದೆ ಎಂದರು.</p>.<p>ಅರಳೀಕಟ್ಟಿ ತೋಂಟೇಶ್ವಬರ ವಿರಕ್ತ ಮಠದ ಶಿವಮೂರ್ತಿ ಸ್ವಾಮಿಗಳು, ತಾರೀಹಾಳದ ಅಡವೀಶ ದೇವರು, ಹೊನ್ನಿಹಾಳದ ಬಸವರಾಜ ದೇವರು ಮಾತನಾಡಿದರು.</p>.<p>ಹಿರೇಬಾಗೇವಾಡಿ ವಿರಾಟ ಹಿಂದೂ ಸಮಾವೇಶ ಸಮಿತಿಯ ಅಧ್ಯಕ್ಷ ಈರಣ್ಣ ರೊಟ್ಟಿ, ಗೌರವಾಧ್ಯಕ್ಷ ರಮೇಶಗೌಡ ಪಾಟೀಲ, ರಾಮಚಂದ್ರ ಏಡಕೆ, ನಾಗೇಂದ್ರ ಸ್ವಾಮಿಗಳು, ಶಿವಮೂರ್ತಿ ಸ್ವಾಮಿಗಳು, ಅಡವೀಶ ದೇವರು, ಬಸವರಾಜ ದೇವರು, ಬಡಾಲ ಅಂಕಲಗಿಯ ರಾಚಯ್ಯ ಸ್ವಾಮಿಗಳು, ಜಾಲಿಕರೆಮ್ಮ ದೇವಸ್ಥಾನದ ಉಳವಪ್ಪಜ್ಜ ವೇದಿಕೆಯಲ್ಲಿದ್ದರು.</p>.<p><strong>ಶೋಭಾ ಯಾತ್ರೆ</strong>: ಸಮಾವೇಶದ ನಿಮಿತ್ತ ಭವ್ಯ ಶೋಭಾಯಾತ್ರೆಯು ಇಲ್ಲಿನ ಬಸವ ವೃತ್ತದಿಂದ ಆರಂಭಗೊಂಡು ಬೈಲಹೊಂಗಲ ರಸ್ತೆ ಮಾರ್ಗವಾಗಿ ಪಡಿಬಸವೇಶ್ವರ ದೇವಸ್ಥಾನದ ಬಳಿಯ ಕಾರ್ಯಕ್ರಮದ ವೇದಿಕೆಯಲ್ಲಿ ಕೊನೆಗೊಂಡಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>