ಬೆಳಗಾವಿ: ಇಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಜಿ. ಹಿರೇಮಠ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ನಡೆದಿದೆ. ಹಿರೇಮಠ ಅವರು ಇದೇ ಜಿಲ್ಲೆಯವರಾಗಿರುವುದರಿಂದ ವರ್ಗಾಯಿಸಲಾಗಿದೆ.
ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ. ಹರೀಶ್ಕುಮಾರ್ ಸಂಜೆ ಅಧಿಕಾರ ವಹಿಸಿಕೊಂಡರು. ಇದಕ್ಕೆ ಮುನ್ನ ಅವರು, ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿದ್ದರು. ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರ ಸೇವಾ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ವರ್ಗವಾಗಿ ಬಂದಿದ್ದ ಹಿರೇಮಠ ಅವರು 2020ರ ಜೂನ್ 30ರಂದು ಅಧಿಕಾರ ಸ್ವೀಕರಿಸಿದ್ದರು. ವರ್ಷದಲ್ಲೇ ವರ್ಗವಾಗಿದ್ದಾರೆ.