ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮ ಪ್ರಕರಣದ ಕುರಿತು ಪೊಲೀಸರಿಗೆ ಮಾಹಿತಿ: ಮನೆ, ವಾಹನಗಳ ಮೇಲೆ ಕಲ್ಲು ತೂರಾಟ

Published 2 ಜನವರಿ 2024, 5:02 IST
Last Updated 2 ಜನವರಿ 2024, 5:02 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಗ್ರಾಮದ ಮುಖಂಡ ಮಾರುತಿ ಹುರಕಡ್ಲಿ ಎನ್ನುವವರ ಮನೆ ಹಾಗೂ ವಾಹಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಇದರಿಂದ ಅಪಾರ ಹಾನಿಯಾಗಿದೆ, ಮನೆಯಲ್ಲಿದ್ದ ₹2 ಲಕ್ಷ ಕೂಡ ದರೋಡೆಯಾಗಿದೆ ಎಂದು ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸುಮಾರು 20ಕ್ಕೂ ಹೆಚ್ಚು ಯುವಕರು ರಾತ್ರಿ ಏಕಾಏಕಿ ಮನೆ ಮೇಲೆ ದಾಳಿ ಮಾಡಿದ್ದಾರೆ. ಚಾಕು, ಚೂರಿಗಳನ್ನು ತೋರಿಸಿ ಹೆದರಿಸಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಮನೆ ಮೇಲೆ ಕಲ್ಲು ತೂರಿದ್ದಾರೆ. ನಮ್ಮ ಕಾರ್‌, ಬೈಕ್‌ಗಳಿಗೂ ಕಲ್ಲು ತೂರಿ ಜಖಂಗೊಳಿಸಿದ್ದಾರೆ ಎಂದು ಮಾರುತಿ ಅವರು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದೆ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಮಾರುತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೇ ದ್ವೇಷದಿಂದ ಅವರ ಮನೆ ಮೇಲೆ ದಾಳಿ ನಡೆದಿರುವ ಸಾಧ್ಯತೆ ಇದೆ. ನಿಜವಾದ ಕಾರಣ ಏನೆಂದು ಮನೆಯ ಮಾಲೀಕರಿಗೂ ಗೊತ್ತಾಗಿಲ್ಲ. ತನಿಖೆ ನಡೆದಿದೆ. ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೆಯ ಮಾಲೀಕರು ಪೊಲೀಸರಿಗೆ ದೂರು ನೀಡಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿದರು. ಅಷ್ಟರೊಳಗೆ ಆರೋಪಿಗಳು ಪರಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT