<p><strong>ಹುಕ್ಕೇರಿ:</strong> ತಾಲ್ಲೂಕಿನ ಬಡಕುಂದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಯರನಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 2023ರ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p>ಪ್ರಾಥಮಿಕ ಆರೋಗ್ಯ ಕೇದ್ರದ ವೈದ್ಯಾಧಿಕಾರಿ ಡಾ.ರವೀಂದ್ರ ಮಾತನಾಡಿ, ಪ್ರತಿಯೊಬ್ಬ ಪ್ರಜೆಯು ಜನಸಂಖ್ಯೆ ಬಗ್ಗೆ ಅರಿತು ಒಳ್ಳೆಯ ನಿರ್ಣಯ ಕೈಗೊಳ್ಳಬೇಕು. ಎಲ್ಲರೂ ಉತ್ತಮ ಆರೋಗ್ಯ ಹೊಂದಿ ನೆಮ್ಮದಿ ಜೀವನ ಸಾಗಿಸಲು ಚಿಕ್ಕ ಕುಟುಂಬ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಿ.ಎ.ಕರಗುಪ್ಪಿ ಮಾತನಾಡಿ, ಜನರಿಗೆ ವಿವಿಧ ರೋಗಗಳು ಬರಲು ಕಾರಣ ಮತ್ತು ಉತ್ತಮ ಆರೋಗ್ಯ ಹೊಂದಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿದರು.</p>.<p><strong>ಮಣಗುತ್ತಿಯಲ್ಲಿ:</strong> ಗ್ರಾಮ ಆರೋಗ್ಯ ಶಿಬಿರದಡಿ ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ತಾಲ್ಲೂಕಿನ ಮಣಗುತ್ತಿ ಗ್ರಾಮ ಪಂಚಾಯ್ತಿಯಲ್ಲಿ ಶುಕ್ರವಾರ ಜರುಗಿತು.</p>.<p>ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಜಿ.ಎ.ಕರಗುಪ್ಪಿ ‘ಆರೋಗ್ಯ ಶಿಕ್ಷಣ ನೀಡಿ’ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರತಿಜ್ಞಾವಿಧಿ ಬೋಧಿಸಿದರು. ಟಿ.ಪಿ.ಐಇಸಿ ಸಮನ್ವಯಾಧಿಕಾರಿ ಮಹಾಂತೇಶ ಬಾಗವಾನಮಠ, ಕರ್ನಾಟಕ ಆರೋಗ್ಯ ಅಭಿವೃದ್ಧಿ ಟ್ರಸ್ಟ್ (ಕೆ.ಎಚ್.ಪಿ.ಟಿ) ಸದಸ್ಯರು, ಕಾಯಕ ಬಂಧು ಮತ್ತು ಮಿತ್ರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ತಾಲ್ಲೂಕಿನ ಬಡಕುಂದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಯರನಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 2023ರ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p>ಪ್ರಾಥಮಿಕ ಆರೋಗ್ಯ ಕೇದ್ರದ ವೈದ್ಯಾಧಿಕಾರಿ ಡಾ.ರವೀಂದ್ರ ಮಾತನಾಡಿ, ಪ್ರತಿಯೊಬ್ಬ ಪ್ರಜೆಯು ಜನಸಂಖ್ಯೆ ಬಗ್ಗೆ ಅರಿತು ಒಳ್ಳೆಯ ನಿರ್ಣಯ ಕೈಗೊಳ್ಳಬೇಕು. ಎಲ್ಲರೂ ಉತ್ತಮ ಆರೋಗ್ಯ ಹೊಂದಿ ನೆಮ್ಮದಿ ಜೀವನ ಸಾಗಿಸಲು ಚಿಕ್ಕ ಕುಟುಂಬ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಿ.ಎ.ಕರಗುಪ್ಪಿ ಮಾತನಾಡಿ, ಜನರಿಗೆ ವಿವಿಧ ರೋಗಗಳು ಬರಲು ಕಾರಣ ಮತ್ತು ಉತ್ತಮ ಆರೋಗ್ಯ ಹೊಂದಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿದರು.</p>.<p><strong>ಮಣಗುತ್ತಿಯಲ್ಲಿ:</strong> ಗ್ರಾಮ ಆರೋಗ್ಯ ಶಿಬಿರದಡಿ ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ತಾಲ್ಲೂಕಿನ ಮಣಗುತ್ತಿ ಗ್ರಾಮ ಪಂಚಾಯ್ತಿಯಲ್ಲಿ ಶುಕ್ರವಾರ ಜರುಗಿತು.</p>.<p>ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಜಿ.ಎ.ಕರಗುಪ್ಪಿ ‘ಆರೋಗ್ಯ ಶಿಕ್ಷಣ ನೀಡಿ’ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರತಿಜ್ಞಾವಿಧಿ ಬೋಧಿಸಿದರು. ಟಿ.ಪಿ.ಐಇಸಿ ಸಮನ್ವಯಾಧಿಕಾರಿ ಮಹಾಂತೇಶ ಬಾಗವಾನಮಠ, ಕರ್ನಾಟಕ ಆರೋಗ್ಯ ಅಭಿವೃದ್ಧಿ ಟ್ರಸ್ಟ್ (ಕೆ.ಎಚ್.ಪಿ.ಟಿ) ಸದಸ್ಯರು, ಕಾಯಕ ಬಂಧು ಮತ್ತು ಮಿತ್ರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>