ಕುಲಸಚಿವರ ಕಚೇರಿಯಲ್ಲಿ ಸುತ್ತಾಡಿ ಮಾಹಿತಿ ಕಲೆ ಹಾಕಿದ ಬಸಪ್ಪ, ಶನಿವಾರ ರಾತ್ರಿ ಕಿಟಕಿ ಮೂಲಕ ಒಳ ನುಗ್ಗಿದ್ದಾರೆ. ಸ್ಕ್ಯಾನರ್ ಹಾಗೂ ಅಂಕಪಟ್ಟಿಗಳನ್ನು ಕಳವು ಮಾಡಿದ್ದಾರೆ. ಪರಾರಿಯಾಗುವಾಗ ಗಮನಿಸಿದ ಭದ್ರತಾ ಸಿಬ್ಬಂದಿ ಕೂಡಲೇ ಅವರನ್ನು ತಡೆದಿದ್ದಾರೆ. ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಅಧಿಕಾರಿಗಳ ಮೂಲಕ ಪೊಲೀಸರಿಗೆ ಮಾಹಿತಿ ಕೊಡಿಸಿದ್ದಾರೆ. ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.