<p><strong>ಬೆಳಗಾವಿ</strong>: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು.</p>.<p>ಖಾಸಬಾಗದ ಬಸವೇಶ್ವರ ವೃತ್ತದ ದೇವಾಂಗ ಮಂಗಲ ಕಾರ್ಯಾಲಯ, ಯಳ್ಳೂರದ ಚಾಂಗಳೇಶ್ವರ ದೇವಸ್ಥಾನದಲ್ಲಿ ತಲಾ ಸಾವಿರ ಮಂದಿಗೆ ಕಾರ್ಡ್ ವಿತರಿಸಿದರು.</p>.<p>‘ವರ್ಷದಿಂದ 17 ಕಡೆಗಳಲ್ಲಿ ಕ್ಯಾಂಪ್ ನಡೆಸಲಾಗಿದೆ. ಕಂಪ್ಯೂಟರ್, ಇಂಟರ್ನೆಟ್, ಪೀಠೋಪಕರಣ, ಸಾರಿಗೆ ವ್ಯವಸ್ಥೆ, ಆಪರೇಟರ್ಗಳಿಗೆ ಉಪಾಹಾರ, ಊಟದ ವ್ಯವಸ್ಥೆ ಮೊದಲಾದ ಸೌಲಭ್ಯವನ್ನು ಸ್ವಂತ ಖರ್ಚಿನಲ್ಲಿ ಕಲ್ಪಿಸಿ ನೋಂದಣಿ ಅಭಿಯಾನ ನಡೆಸಲಾಗಿತ್ತು. ಆಯಾ ಭಾಗದ 97ಸಾವಿರಕ್ಕೂ ಹೆಚ್ಚು ಜನರು ಸದ್ಬಳಕೆ ಮಾಡಿಕೊಂಡಿದ್ದರು. ಈಗ ಅವರಿಗೆ ಚೀಟಿಗಳನ್ನು ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ನೋಂದಾಯಿಸಿದ ಎಲ್ಲರಿಗೂ ಹಂತ ಹಂತವಾಗಿ ಕಾರ್ಡ್ಗಳನ್ನು ವಿತರಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಬಿಜೆಪಿ ಬೆಳಗಾವಿ ದಕ್ಷಿಣ ಘಟಕದ ಆಧ್ಯಕ್ಷೆ ಗೀತಾ ಸುತಾರ, ನಾರಾಯಣ ಕುಲಗೋಡ ಹಾಗೂ ಯಳ್ಳೂರ ಗ್ರಾಮ ಪಂಚಾಯ್ತಿ ಸದಸ್ಯರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು.</p>.<p>ಖಾಸಬಾಗದ ಬಸವೇಶ್ವರ ವೃತ್ತದ ದೇವಾಂಗ ಮಂಗಲ ಕಾರ್ಯಾಲಯ, ಯಳ್ಳೂರದ ಚಾಂಗಳೇಶ್ವರ ದೇವಸ್ಥಾನದಲ್ಲಿ ತಲಾ ಸಾವಿರ ಮಂದಿಗೆ ಕಾರ್ಡ್ ವಿತರಿಸಿದರು.</p>.<p>‘ವರ್ಷದಿಂದ 17 ಕಡೆಗಳಲ್ಲಿ ಕ್ಯಾಂಪ್ ನಡೆಸಲಾಗಿದೆ. ಕಂಪ್ಯೂಟರ್, ಇಂಟರ್ನೆಟ್, ಪೀಠೋಪಕರಣ, ಸಾರಿಗೆ ವ್ಯವಸ್ಥೆ, ಆಪರೇಟರ್ಗಳಿಗೆ ಉಪಾಹಾರ, ಊಟದ ವ್ಯವಸ್ಥೆ ಮೊದಲಾದ ಸೌಲಭ್ಯವನ್ನು ಸ್ವಂತ ಖರ್ಚಿನಲ್ಲಿ ಕಲ್ಪಿಸಿ ನೋಂದಣಿ ಅಭಿಯಾನ ನಡೆಸಲಾಗಿತ್ತು. ಆಯಾ ಭಾಗದ 97ಸಾವಿರಕ್ಕೂ ಹೆಚ್ಚು ಜನರು ಸದ್ಬಳಕೆ ಮಾಡಿಕೊಂಡಿದ್ದರು. ಈಗ ಅವರಿಗೆ ಚೀಟಿಗಳನ್ನು ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ನೋಂದಾಯಿಸಿದ ಎಲ್ಲರಿಗೂ ಹಂತ ಹಂತವಾಗಿ ಕಾರ್ಡ್ಗಳನ್ನು ವಿತರಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಬಿಜೆಪಿ ಬೆಳಗಾವಿ ದಕ್ಷಿಣ ಘಟಕದ ಆಧ್ಯಕ್ಷೆ ಗೀತಾ ಸುತಾರ, ನಾರಾಯಣ ಕುಲಗೋಡ ಹಾಗೂ ಯಳ್ಳೂರ ಗ್ರಾಮ ಪಂಚಾಯ್ತಿ ಸದಸ್ಯರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>