ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್ಮಾನ್‌ ಭಾರತ: ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

Last Updated 9 ಫೆಬ್ರುವರಿ 2020, 11:41 IST
ಅಕ್ಷರ ಗಾತ್ರ

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಇಲ್ಲಿನ ಜೆಎನ್‌ಎಂಸಿಯ ವಿ.ಡಿ. ಪಾಟೀಲ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಆರ್. ರಾಮಚಂದ್ರನ್‌ ಅಧ್ಯಕ್ಷತೆಯಲ್ಲಿ, ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಕುರಿತು ಚರ್ಚಿಸಲಾಯಿತು. ಉತ್ತಮ ಆರೋಗ್ಯ ಯೋಜನೆಯಾಗಿರುವ ಇದನ್ನುಸಾರ್ವಜನಿಕರಿಗೆ ತಲುಪಿಸಬೇಕು ಎಂದು ಸೂಚಿಸಲಾಯಿತು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲಾಯಿತು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ನಿರ್ದೇಶಕ ಡಾ.ಓಂಪ್ರಕಾಶ ಪಾಟೀಲ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ರಾಜ್ಯ ನೋಡಲ್ ಅಧಿಕಾರಿಡಾ.ಸುರೇಶ ಶಾಸ್ತ್ರಿ, ಉಪನಿರ್ದೇಶಕರಾದ ಡಾ.ರಾಜಕುಮಾರ್ ಎನ್., ಡಾ.ರಾಮಚಂದ್ರ ಬಾಯರಿ, ಡಾ.ಬಿ.ಆರ್. ರಜನಿ, ಪರಿಮಳಾ, ಡಾ.ಭಾನು ಮೂರ್ತಿ, ಡಾ.ವಿವೇಕ ದೊರೆ, ಬೆಳಗಾವಿ ವಿಭಾಗದ ಎಲ್ಲ ಏಳು ಜಿಲ್ಲೆಗಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಗೋಕಾಕ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ಉತ್ತಮ ಸಾಧನೆ ತೋರಿದ್ದರಿಂದ ಗೋಕಾಕ ಸಾರ್ವನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಅವರನ್ನು ಸತ್ಕರಿಸಲಾಯಿತು. ಉತ್ತಮ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ವಿಭಾಗೀಯ ಸಹ ನಿರ್ದೆಶಕ ಡಾ.ಅಪ್ಪಾಸಾಹೇಬ ಎಂ. ನರಟ್ಟಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT