ಸರ್ಕಾರಿ ಪ.ಪೂ. ಕಾಲೇಜು ಹಾಗೂ ಜೆಎಸ್ಎಸ್ ಪದವಿ ಕಾಲೇಜುಗಳಲ್ಲಿ ಪ್ರತ್ಯೇಕ ತರಬೇತಿ ಆಯೋಜಿಸಲಾಗಿತ್ತು. ಪ್ರತಿ ಕೇಂದ್ರದಲ್ಲಿ 1,240 ಸಿಬ್ಬಂದಿ ಭಾಗವಹಿಸಿದ್ದರು. ಆಹಾರ ಇಲಾಖೆಯ ಉಪ ತಹಶೀಲ್ದಾರ್ ಎಂ.ಎ. ಚೌಧರಿ ರಕ್ತದೊತ್ತಡ ಕಡಿಮೆಯಾಗಿ ಅನಾರೋಗ್ಯಕ್ಕೆ ಒಳಗಾದ್ದರಿಂದ ಅವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಸಾಗಿಸಲಾಯಿತು. ಸವದತ್ತಿಯ ಉಪ ತಹಶೀಲ್ದಾರ್ ಸುರೇಶ ಎಂ. ಕಟಮಳ್ಳಿ ಹಾಗೂ ಶಿವಮೊಗ್ಗದ ಕಂದಾಯ ಸಿಬ್ಬಂದಿ ರಮೇಶ ಎಚ್.ಎಂ. ಅವರಿಗೂ ರಕ್ತದೊತ್ತಡ ಕಡಿಮೆಯಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.