ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ: ಭಾರಿ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ

Last Updated 23 ಜುಲೈ 2021, 15:59 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಭಾರಿ ಮಳೆಯಿಂದಾಗಿ ಹೊರವಲಯದ ರಾಮನಗರ ಬಳಿ ರಭಸವಾಗಿ ಹರಿಯುತ್ತಿರುವ ಹಳ್ಳದಲ್ಲಿ ಬಾಲಕಿ ಕೊಚ್ಚಿಕೊಂಡು ಹೋದ ಘಟನೆ ಶುಕ್ರವಾರ ನಡೆದಿದೆ.

‘ಬಾಲಕಿಯನ್ನು ರಾಮನಗರದ ನಿವಾಸಿ ಕಿರಣ ಶಾನೂರ ವಿಭೂತಿ (12) ಎಂದು ಗುರುತಿಸಲಾಗಿದೆ. ಚಿಕ್ಕೋಡಿಗೆ ಹೋಗಿ ಬರುತ್ತಿದ್ದ ಮೂವರು ಸಹೋದರಿಯರು ಹಳ್ಳ ದಾಟಿಕೊಂಡು ರಾಮನಗರಕ್ಕೆ ತೆರಳುತ್ತಿದ್ದಾಗ ನೀರಿನ ರಭಸ ಹೆಚ್ಚಾದ್ದರಿಂದ ಕೊಚ್ಚಿಕೊಂಡು ಹೋಗಿದ್ದರು. ಗಮನಿಸಿದ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಕಿರಣ ಕೊಚ್ಚಿ ಹೋಗಿದ್ದಾಳೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಸಿಪಿಐ ಆರ್.ಆರ್. ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT