ಧಾರಾಕಾರ ಮಳೆ: 8 ವಿದ್ಯುತ್ ಕಂಬಗಳಿಗೆ ಹಾನಿ
ಸಂಕೇಶ್ವರ: ಪಟ್ಟಣದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಲಕ್ಷ್ಮಿ ಹಳ್ಳ ತುಂಬಿ ಹರಿಯಿತು. ಲಕ್ಷ್ಮಿ ದೇವಸ್ಥಾನ ಆವರಣಕ್ಕೆ ನೀರು ನುಗ್ಗಿತ್ತು. ಅಲ್ಲದೆ ರಸ್ತೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಸಮೀಪದ ಅಮ್ಮಣಗಿಯಲ್ಲಿ ವಿದ್ಯುತ್ ಪರಿವರ್ತಕಕ್ಕೆ ಸಿಡಿಲು ಬಡಿದಿದ್ದು 8 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅದೃಷ್ಟವಷಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಅಮ್ಮಣಗಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.