ಯಲ್ಲಮ್ಮನಗುಡ್ಡದಲ್ಲಿ ‘ಶೀಗಿ ಹುಣ್ಣಿಮೆ’ ಅಂಗವಾಗಿ ಜಾತ್ರೆ ನಡೆಯುತ್ತಿದೆ. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು, ಗುಡ್ಡಕ್ಕೆ ಬರುತ್ತಿದ್ದಾರೆ. ಧಾರವಾಡದಿಂದ ಸವದತ್ತಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಬಂದ್ ಆಗಿರುವುದರಿಂದ, ವಾಹನಗಳು ಇನಾಮಹೊಂಗಲ– ಉಪ್ಪಿನ ಬೆಟಗೇರಿ ಮಾರ್ಗವಾಗಿ ಧಾರವಾಡಕ್ಕೆ ಹೋಗಬೇಕಾಗಿದೆ.