ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋರು ಗಾಳಿ-ಮಳೆ: ತಗಡಿನ ಶೀಟು ಹಾರಿ ಹೋಗಿ ತೀವ್ರ ಹಾನಿ

Last Updated 16 ಮೇ 2021, 9:30 IST
ಅಕ್ಷರ ಗಾತ್ರ

ಬೆಳಗಾವಿ: ಜೋರು ಗಾಳಿ-ಮಳೆಯಿಂದಾಗಿ ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮದ ಸರ್ಕಾರಿ ಶಾಲೆಯ ಚಾವಣಿ ಹಾರಿ ಹೋಗಿದೆ.

ಗ್ರಾಮದ ಕೆಲವು ಮನೆಗಳ ಹೆಂಚುಗಳು ಮತ್ತು ತಗಡಿನ ಶೀಟುಗಳು ಹಾರಿ ಹೋಗಿ ತೀವ್ರ ಹಾನಿ ಸಂಭವಿಸಿದೆ.

ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗಿದೆ. ವಿದ್ಯುತ್ ತಂತಿಗಳು ಒಂದಕ್ಕೊಂದು ಸಿಲುಕಿಕೊಂಡಿರುವ ಪರಿಣಾಮವಾಗಿ, ಈ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಇಲ್ಲವಾಗಿದೆ.

ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೆಸ್ಕಾಂನವರು ಆದಷ್ಟು ಬೇಗ ವಿದ್ಯುತ್ ಮಾರ್ಗ ಸರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT