ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ 1,20,375 ಕ್ಯೂಸೆಕ್, ದೂಧಗಂಗಾ ನದಿಯಿಂದ 29,568 ಕ್ಯೂಸೆಕ್ ಸೇರಿ 1,49,943 ಕ್ಯೂಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಹರಿದುಬರುತ್ತಿದೆ. ಈ ಪ್ರಮಾಣ 2.50 ಲಕ್ಷ ಕ್ಯುಸೆಕ್ಗೆ ಏರಿಕೆಯಾದರೆ ಕೃಷ್ಣಾ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ.