<p><strong>ಬೆಳಗಾವಿ</strong>: ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಮಳೆ ತುಸು ಬಿಡುವು ನೀಡಿದೆ. ನಗರದಲ್ಲಿ ತುಂತುರು ಮಳೆ ನಿರಂತರವಾಗಿದೆ.</p>.<p>ಸೋಮವಾರ ಸುರಿದ ಮಳೆಯ ಕಾರಣ ಇಲ್ಲಿನ ಪಾಟೀಲ ಗಲ್ಲಿಯಲ್ಲಿ ಒಳಚರಂಡಿ ತುಂಬಿಕೊಂಡು, ಮಳೆಯ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿತು. ಮಂಗಳವಾರ ಕೂಡ ಈ ಅವಾಂತರ ಮುಂದುವರಿಯಿತು. ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಲು ಜನ ಪರದಾಡುವುದು ಸಾಮಾನ್ಯವಾಗಿತ್ತು. ಪಾಟೀಲ ಗಲ್ಲಿಯಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ಹೊಕ್ಕಿದೆ.</p>.<p>ಅಧಿಕಾರಿಗಳು ಸರಿಯಾಗಿ ಚರಂಡಿ ನಿರ್ವಹಣೆ ಮಾಡದಿರುವುದೇ ನಮ್ಮ ಸಂಕಷ್ಟಕ್ಕೆ ಕಾರಣ. ಕೂಡಲೇ ಚರಂಡಿ ದುರಸ್ತಿ ಮಾಡಿಸಬೇಕು ಎಂದು ಇಲ್ಲಿನ ನಿವಾಸಿ ಚಿರಾಗ್ ಪೊರ್ವಾಲ್ ಹಾಗೂ ಕುಟುಂಬದವರು ಆಗ್ರಹಿಸಿದರು.</p>.<p><strong>ಸೇತುವೆ ಸಂಚಾರ ಬಂದ್</strong></p>.<p>ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಮಂಗಳವಾರ ಕೂಡ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಇದರಿಂದ ಚಿಕ್ಕೋಡಿ, ನಿಪ್ಪಾಣಿ, ಮೂಡಲಗಿ, ಗೋಕಾಕ ತಾಲ್ಲೂಕಿನ ಆರು ಕಿರು ಸೇತುವೆಗಳು ಮುಳುಗಿದ್ದು, ಸಂಚಾರ ಬಂದ್ ಆಗಿದೆ.</p>.<p>ಗೋಕಾಕ ಹೊರವಲಯದ ಶಿಂಗಳಾಪುರ ಸೇತುವೆ ಮತ್ತೊಮ್ಮೆ ಜಲಾವೃತಗೊಂಡಿದ್ದು, ಮಂಗಳವಾರ ಕೂಡ ಸಂಚಾರ ಬಂದ್ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ಕಡೆಗಳಲ್ಲಿ ಪೊಲೀಸರು ಕಾವಲು ನಿಂತಿದ್ದಾರೆ.</p>.<p>ಮೂಡಲಗಿ ತಾಲ್ಲೂಕಿನ ಸುಣಧೋಳಿ ಹಾಗೂ ಅವರಾದಿ ಸೇತುವೆಗಳು ಕೂಡ ಮುಳುಗಡೆಯಾಗಿವೆ.</p>.<p><strong>ದೇವಸ್ಥಾನ, ದರ್ಗಾಗೆ ನುಗ್ಗಿದ ನೀರು</strong></p>.<p>ನಿಪ್ಪಾಣಿ ತಾಲ್ಲೂಕಿನ ಕಾರದಗಾ ಗ್ರಾಮದ ಬಂಗಾಲಿ ಬಾಬಾ ಮಂದಿರದ ಸುತ್ತ ದೂಧಗಂಗಾ ನದಿ ನೀರು ಆವರಿಸಿದೆ.</p>.<p>ಇನ್ನೊಂದೆಡೆ, ನಿಪ್ಪಾಣಿ ತಾಲ್ಲೂಕಿನ ಹುನ್ನರಗಿ ಗ್ರಾಮದ, ವೇದಗಂಗಾ ನದಿ ತೀರದಲ್ಲಿರುವ ಲಕ್ಷ್ಮೀ- ನಾರಾಯಣ ಮಂದಿರದಲ್ಲಿ ಸೋಮವಾರವೇ ನದಿ ನೀರು ನುಗ್ಗಿದೆ. ಮಂಗಳವಾರ ಕೂಡ ದೇವಸ್ಥಾನ ಪ್ರವೇಶ ಸಾಧ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಮಳೆ ತುಸು ಬಿಡುವು ನೀಡಿದೆ. ನಗರದಲ್ಲಿ ತುಂತುರು ಮಳೆ ನಿರಂತರವಾಗಿದೆ.</p>.<p>ಸೋಮವಾರ ಸುರಿದ ಮಳೆಯ ಕಾರಣ ಇಲ್ಲಿನ ಪಾಟೀಲ ಗಲ್ಲಿಯಲ್ಲಿ ಒಳಚರಂಡಿ ತುಂಬಿಕೊಂಡು, ಮಳೆಯ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿತು. ಮಂಗಳವಾರ ಕೂಡ ಈ ಅವಾಂತರ ಮುಂದುವರಿಯಿತು. ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಲು ಜನ ಪರದಾಡುವುದು ಸಾಮಾನ್ಯವಾಗಿತ್ತು. ಪಾಟೀಲ ಗಲ್ಲಿಯಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ಹೊಕ್ಕಿದೆ.</p>.<p>ಅಧಿಕಾರಿಗಳು ಸರಿಯಾಗಿ ಚರಂಡಿ ನಿರ್ವಹಣೆ ಮಾಡದಿರುವುದೇ ನಮ್ಮ ಸಂಕಷ್ಟಕ್ಕೆ ಕಾರಣ. ಕೂಡಲೇ ಚರಂಡಿ ದುರಸ್ತಿ ಮಾಡಿಸಬೇಕು ಎಂದು ಇಲ್ಲಿನ ನಿವಾಸಿ ಚಿರಾಗ್ ಪೊರ್ವಾಲ್ ಹಾಗೂ ಕುಟುಂಬದವರು ಆಗ್ರಹಿಸಿದರು.</p>.<p><strong>ಸೇತುವೆ ಸಂಚಾರ ಬಂದ್</strong></p>.<p>ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಮಂಗಳವಾರ ಕೂಡ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಇದರಿಂದ ಚಿಕ್ಕೋಡಿ, ನಿಪ್ಪಾಣಿ, ಮೂಡಲಗಿ, ಗೋಕಾಕ ತಾಲ್ಲೂಕಿನ ಆರು ಕಿರು ಸೇತುವೆಗಳು ಮುಳುಗಿದ್ದು, ಸಂಚಾರ ಬಂದ್ ಆಗಿದೆ.</p>.<p>ಗೋಕಾಕ ಹೊರವಲಯದ ಶಿಂಗಳಾಪುರ ಸೇತುವೆ ಮತ್ತೊಮ್ಮೆ ಜಲಾವೃತಗೊಂಡಿದ್ದು, ಮಂಗಳವಾರ ಕೂಡ ಸಂಚಾರ ಬಂದ್ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ಕಡೆಗಳಲ್ಲಿ ಪೊಲೀಸರು ಕಾವಲು ನಿಂತಿದ್ದಾರೆ.</p>.<p>ಮೂಡಲಗಿ ತಾಲ್ಲೂಕಿನ ಸುಣಧೋಳಿ ಹಾಗೂ ಅವರಾದಿ ಸೇತುವೆಗಳು ಕೂಡ ಮುಳುಗಡೆಯಾಗಿವೆ.</p>.<p><strong>ದೇವಸ್ಥಾನ, ದರ್ಗಾಗೆ ನುಗ್ಗಿದ ನೀರು</strong></p>.<p>ನಿಪ್ಪಾಣಿ ತಾಲ್ಲೂಕಿನ ಕಾರದಗಾ ಗ್ರಾಮದ ಬಂಗಾಲಿ ಬಾಬಾ ಮಂದಿರದ ಸುತ್ತ ದೂಧಗಂಗಾ ನದಿ ನೀರು ಆವರಿಸಿದೆ.</p>.<p>ಇನ್ನೊಂದೆಡೆ, ನಿಪ್ಪಾಣಿ ತಾಲ್ಲೂಕಿನ ಹುನ್ನರಗಿ ಗ್ರಾಮದ, ವೇದಗಂಗಾ ನದಿ ತೀರದಲ್ಲಿರುವ ಲಕ್ಷ್ಮೀ- ನಾರಾಯಣ ಮಂದಿರದಲ್ಲಿ ಸೋಮವಾರವೇ ನದಿ ನೀರು ನುಗ್ಗಿದೆ. ಮಂಗಳವಾರ ಕೂಡ ದೇವಸ್ಥಾನ ಪ್ರವೇಶ ಸಾಧ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>