ಬೆಳಗಾವಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಐಪಿಸಿ ಕಲಂ 188ರ ಅಡಿ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ 20ರಂದು ಲಕ್ಷ್ಮಿ ಹೆಬ್ಬಾಳಕರ ಅವರು ತಮ್ಮ ಗೃಹಕಚೇರಿಯ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆತರ ಸಭೆ ನಡೆಸಿದ್ದರು. ಈ ಸಭೆಗೆ ಅನುಮತಿ ಪಡೆದಿಲ್ಲ. ನೂರಾರು ಕಾರ್ಯಕರ್ತೆಯರನ್ನು ಸೇರಿಸಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಏಪ್ರಿಲ್ 30ರೊಳಗೆ ಉತ್ತರ ನೀಡಬೇಕು ಎಂದು ಸಮನ್ಸ್ನಲ್ಲಿ ಸೂಚಿಸಲಾಗಿದೆ. ಎರಡನೇ ಆರೋಪಿಯಾಗಿ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣವರ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.