‘ಬಿಜೆಪಿ ಮತ್ತು ಆರ್ಎಸ್ಎಸ್ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯವಿತ್ತು. ಆದರೆ, ಈಗ ಹೆಗಡೆ ಅಂಥವರು ನೀಡಿದ ಹೇಳಿಕೆಗಳು ಆ ಪಕ್ಷದವರನ್ನು ಬಹಿರಂಗಪಡಿಸಿವೆ. ಇಂಥದ್ದೇ ಕಾರಣಕ್ಕೆ ಸಿ.ಟಿ.ರವಿ ಅವರಂತಹ ಕೆಲವರು ಮನೆ ಸೇರಿದ್ದಾರೆ’ ಎಂದರು.
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡಿಸಿ ಯಾತ್ರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈಗ ಮಣಿಪುರದಿಂದ ಮುಂಬೈವರೆಗೆ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದ್ದು, ಅದಕ್ಕೂ ಉತ್ತಮ ಸ್ಪಂದನೆ ಸಿಗುತ್ತಿದೆ’ ಎಂದು ತಿಳಿಸಿದರು.