<p><strong>ಬೆಳಗಾವಿ: </strong>ನೆರೆಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆಂದು ಆ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತಕ್ಕೆ ತೆರಳಲೆಂದು ಇಲ್ಲಿನ ಸರ್ಕಾರಿ ಪ್ರವಾಸಿಮಂದಿರದಲ್ಲಿ ತಂಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಬೆಳಿಗ್ಗೆ ಹೆಲಿಕಾಪ್ಟರ್ಗಾಗಿ ಮೂರೂಕಾಲು ತಾಸು ತಂಗಿದರು.</p>.<p>ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಬಂದಿರಲಿಲ್ಲ. ಹೀಗಾಗಿ ಅವರು ಪ್ರವಾಸಿಮಂದಿರದಲ್ಲೇ ಉಳಿಯಬೇಕಾಯಿತು. ಬೆಂಗಳೂರಿಗೆ ಮರಳುವುದೋ, ಮಹಾರಾಷ್ಟ್ರಕ್ಕೆ ಹೋಗುವುದೋ ಎಂಬ ಗೊಂದಲಕ್ಕೂ ಅವರು ಸಿಲುಕಿದ್ದರು.</p>.<p>ಸಾಂಬ್ರಾ ವಿಮಾನನಿಲ್ದಾಣಕ್ಕೆ ಹೊರಡಲು ಹೊರ ಬಂದ ಅವರು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಕರೆ ಮಾಡಿದರು. ಹೆಲಿಕಾಪ್ಟರ್ ವ್ಯವಸ್ಥೆ ಸರಿಯಾಗಿ ಮಾಡಿಲ್ಲದಿರುವುದಕ್ಕೆ ತರಾಟೆಗೆ ತೆಗೆದುಕೊಂಡರು. ‘ನನಗೆ ಹುಷಾರಿಲ್ಲ. ಹೆಲಿಕಾಪ್ಟರ್ ಕೂಡ ಸಮಸ್ಯೆಯಾಗಿದೆ. ಬಹಳಷ್ಟು ತಡವಾಗಿದೆ. ಎಲ್ಲ ಪ್ರವಾಸ ರದ್ದು ಮಾಡು, ಬೆಂಗಳೂರಿಗೆ ವಾಪಸಾಗುತ್ತೇನೆ’ ಎಂದೂ ಹೇಳಿದರಿ. ಆದರೂ ಪ್ರಚಾರಕ್ಕೆ ಬರುವಂತೆ ಸವದಿ ಪಟ್ಟು ಹಿಡಿದರು. ಆಗ ‘ನೀನು ಹೇಳಿದಂತೆ’ ಎಂದು ಸುಮ್ಮನಾದರು.</p>.<p>ಮಧ್ಯಾಹ್ನ 12.30ಕ್ಕೆ ಹೆಲಿಕಾಪ್ಟರ್ ವ್ಯವಸ್ಥೆಯಾಗಿದೆ ಎಂದು ಸವದಿ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದ ಬಳಿಕ ಪ್ರವಾಸಿಮಂದಿರದ ಒಳಕ್ಕೆ ಹೋದರು. ಬೆಳಿಗ್ಗೆಯಿಂದಲೂ ತಮ್ಮೊಂದಿಗೇ ಇದ್ದ ಶಾಸಕ ಉಮೇಶ ಕತ್ತಿ ಸೇರಿದಂತೆ ಮುಖಂಡರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು.</p>.<p>11.40ರ ವೇಳೆಗೆ ಮುಖ್ಯಮಂತ್ರಿ ವಿಮಾನನಿಲ್ದಾಣದತ್ತ ತೆರಳಿದರು. ಬಳಿಕವಷ್ಟೇ ಪೊಲೀಸರು ಹಾಗೂ ಅಧಿಕಾರಿಗಳು ನಿಟ್ಟುಸಿರು ಬಿಟ್ಟರು. ಪೂರ್ವ ನಿಗದಿಯಂತೆ 8.30ರ ವೇಳೆಗೆ ಅವರು ಇಲ್ಲಿಂದ ನಿರ್ಗಮಿಸಬೇಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನೆರೆಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆಂದು ಆ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತಕ್ಕೆ ತೆರಳಲೆಂದು ಇಲ್ಲಿನ ಸರ್ಕಾರಿ ಪ್ರವಾಸಿಮಂದಿರದಲ್ಲಿ ತಂಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಬೆಳಿಗ್ಗೆ ಹೆಲಿಕಾಪ್ಟರ್ಗಾಗಿ ಮೂರೂಕಾಲು ತಾಸು ತಂಗಿದರು.</p>.<p>ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಬಂದಿರಲಿಲ್ಲ. ಹೀಗಾಗಿ ಅವರು ಪ್ರವಾಸಿಮಂದಿರದಲ್ಲೇ ಉಳಿಯಬೇಕಾಯಿತು. ಬೆಂಗಳೂರಿಗೆ ಮರಳುವುದೋ, ಮಹಾರಾಷ್ಟ್ರಕ್ಕೆ ಹೋಗುವುದೋ ಎಂಬ ಗೊಂದಲಕ್ಕೂ ಅವರು ಸಿಲುಕಿದ್ದರು.</p>.<p>ಸಾಂಬ್ರಾ ವಿಮಾನನಿಲ್ದಾಣಕ್ಕೆ ಹೊರಡಲು ಹೊರ ಬಂದ ಅವರು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಕರೆ ಮಾಡಿದರು. ಹೆಲಿಕಾಪ್ಟರ್ ವ್ಯವಸ್ಥೆ ಸರಿಯಾಗಿ ಮಾಡಿಲ್ಲದಿರುವುದಕ್ಕೆ ತರಾಟೆಗೆ ತೆಗೆದುಕೊಂಡರು. ‘ನನಗೆ ಹುಷಾರಿಲ್ಲ. ಹೆಲಿಕಾಪ್ಟರ್ ಕೂಡ ಸಮಸ್ಯೆಯಾಗಿದೆ. ಬಹಳಷ್ಟು ತಡವಾಗಿದೆ. ಎಲ್ಲ ಪ್ರವಾಸ ರದ್ದು ಮಾಡು, ಬೆಂಗಳೂರಿಗೆ ವಾಪಸಾಗುತ್ತೇನೆ’ ಎಂದೂ ಹೇಳಿದರಿ. ಆದರೂ ಪ್ರಚಾರಕ್ಕೆ ಬರುವಂತೆ ಸವದಿ ಪಟ್ಟು ಹಿಡಿದರು. ಆಗ ‘ನೀನು ಹೇಳಿದಂತೆ’ ಎಂದು ಸುಮ್ಮನಾದರು.</p>.<p>ಮಧ್ಯಾಹ್ನ 12.30ಕ್ಕೆ ಹೆಲಿಕಾಪ್ಟರ್ ವ್ಯವಸ್ಥೆಯಾಗಿದೆ ಎಂದು ಸವದಿ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದ ಬಳಿಕ ಪ್ರವಾಸಿಮಂದಿರದ ಒಳಕ್ಕೆ ಹೋದರು. ಬೆಳಿಗ್ಗೆಯಿಂದಲೂ ತಮ್ಮೊಂದಿಗೇ ಇದ್ದ ಶಾಸಕ ಉಮೇಶ ಕತ್ತಿ ಸೇರಿದಂತೆ ಮುಖಂಡರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು.</p>.<p>11.40ರ ವೇಳೆಗೆ ಮುಖ್ಯಮಂತ್ರಿ ವಿಮಾನನಿಲ್ದಾಣದತ್ತ ತೆರಳಿದರು. ಬಳಿಕವಷ್ಟೇ ಪೊಲೀಸರು ಹಾಗೂ ಅಧಿಕಾರಿಗಳು ನಿಟ್ಟುಸಿರು ಬಿಟ್ಟರು. ಪೂರ್ವ ನಿಗದಿಯಂತೆ 8.30ರ ವೇಳೆಗೆ ಅವರು ಇಲ್ಲಿಂದ ನಿರ್ಗಮಿಸಬೇಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>