ಸಾಂಬ್ರಾ ವಿಮಾನನಿಲ್ದಾಣಕ್ಕೆ ಹೊರಡಲು ಹೊರ ಬಂದ ಅವರು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಕರೆ ಮಾಡಿದರು. ಹೆಲಿಕಾಪ್ಟರ್ ವ್ಯವಸ್ಥೆ ಸರಿಯಾಗಿ ಮಾಡಿಲ್ಲದಿರುವುದಕ್ಕೆ ತರಾಟೆಗೆ ತೆಗೆದುಕೊಂಡರು. ‘ನನಗೆ ಹುಷಾರಿಲ್ಲ. ಹೆಲಿಕಾಪ್ಟರ್ ಕೂಡ ಸಮಸ್ಯೆಯಾಗಿದೆ. ಬಹಳಷ್ಟು ತಡವಾಗಿದೆ. ಎಲ್ಲ ಪ್ರವಾಸ ರದ್ದು ಮಾಡು, ಬೆಂಗಳೂರಿಗೆ ವಾಪಸಾಗುತ್ತೇನೆ’ ಎಂದೂ ಹೇಳಿದರಿ. ಆದರೂ ಪ್ರಚಾರಕ್ಕೆ ಬರುವಂತೆ ಸವದಿ ಪಟ್ಟು ಹಿಡಿದರು. ಆಗ ‘ನೀನು ಹೇಳಿದಂತೆ’ ಎಂದು ಸುಮ್ಮನಾದರು.