ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ‘ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಗ್ರಾಮದಲ್ಲಿ ದೇವಸ್ಥಾನ ಇದ್ದರೆ ಆ ಗ್ರಾಮದಲ್ಲಿ, ಆ ಪ್ರದೇಶದಲ್ಲಿ ನೆಮ್ಮದಿ, ಶಾಂತಿ ಇರುತ್ತದೆ. ಹಣ ಸದುಪಯೋಗವಾಗಿ ಮಾದರಿಯಾಗಿ ದೇವಸ್ಥಾನ ನಿರ್ಮಾಣವಾಗಲಿ, ಜನರು ಸುಖ, ಶಾಂತಿ, ನೆಮ್ಮದಿಯಿಂದ ಬದುಕಲಿ’ ಎಂದು ಆಶಿಸಿದರು.