<p><strong>ಬೆಳಗಾವಿ: </strong>‘ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ’ ಎಂದು ಯರಹಳ್ಳಿಯ ವೇನನಾನಂದ ಸ್ವಾಮೀಜಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ನಗರಪಾಲಿಕೆ ಸಹಯೋಗದಲ್ಲಿ ಸದಾಶಿವನಗರದ ರೆಡ್ಡಿ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆ ಸಹನಾ ಮೂರ್ತಿ. ಹೆಣ್ಣನ್ನು ಭೂಮಿಗೆ ಹೋಲಿಸಲಾಗುತ್ತದೆ. ಕರುಣಾಮಯಿ ಹೆಣ್ಣು ವಿಶ್ವವನ್ನು ಪೊರೆಯುವ ತಾಯಿಯಂತೆ ಮಲ್ಲಮ್ಮ ಅವತರಿಸಿದ್ದರು. ಆ ಕಾಲದಲ್ಲಿಯೇ ಸಮಾಜ ಸುಧಾರಣೆಗೆ ಮುಂದೆ ಬಂದಿದ್ದರು. ಅವರ ಆತ್ಮಬಲ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಬೇಕು’ ಎಂದು ಆಶಿಸಿದರು.</p>.<p>‘ಸಮಸ್ಯೆಗಳನ್ನು ಎದುರಿಸಿ ಬದುಕುವುದೇ ನಿಜವಾದ ಜೀವನ. ಸಮಸ್ಯೆ, ಸಂಕಷ್ಟಗಳ ನಡುವೆಯೂ ಮಲ್ಲಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ’ ಎಂದರು.</p>.<p>‘ಇಂದಿನ ಯುವಪೀಳಿಗೆಯವರು ಹಿರಿಯರಿಂದ ಕಲಿಯಬೇಕಾದ ಸಂಸ್ಕಾರಗಳಿಂದ ವಂಚಿತವಾಗುತ್ತಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ ಮಾತನಾಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮೈತ್ರೇಯಿಣಿ ಗದಿಗೆಪ್ಪಗೌಡರ ಉಪನ್ಯಾಸ ನೀಡಿದರು.</p>.<p>ಡಿಸಿಪಿ ಯಶೋದಾ ವಂಟಗೋಡಿ, ಬೆಳಗಾವಿ ರೆಡ್ಡಿ ಸಂಘದ ಉಪಾಧ್ಯಕ್ಷ ಬಿ.ಎನ್. ಬಾವಲತ್ತಿ, ಎಸಿಪಿ ನಾರಾಯಣ ಭರಮನಿ, ಮುಖಂಡರಾದ ಶ್ರೀಕಾಂತ ಜಾಲಿಕಟ್ಟಿ, ಇಂದಿರಾ ಭೀಮರೆಡ್ಡಿ ಇದ್ದರು.</p>.<p>ಸುರೇಶ ಚಂದರಗಿ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಬಿ.ಎಸ್. ನಾಡಗೌಡರ ಪರಿಚಯಿಸಿದರು. ಹೇಮಾ ಪಾಟೀಲ ಹಾಗೂ ಶಶಿಕಲಾ ನಾಡಗೌಡ ನಿರೂಪಿಸಿದರು. ಎಸ್.ಯು. ಜಮಾದಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ’ ಎಂದು ಯರಹಳ್ಳಿಯ ವೇನನಾನಂದ ಸ್ವಾಮೀಜಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ನಗರಪಾಲಿಕೆ ಸಹಯೋಗದಲ್ಲಿ ಸದಾಶಿವನಗರದ ರೆಡ್ಡಿ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆ ಸಹನಾ ಮೂರ್ತಿ. ಹೆಣ್ಣನ್ನು ಭೂಮಿಗೆ ಹೋಲಿಸಲಾಗುತ್ತದೆ. ಕರುಣಾಮಯಿ ಹೆಣ್ಣು ವಿಶ್ವವನ್ನು ಪೊರೆಯುವ ತಾಯಿಯಂತೆ ಮಲ್ಲಮ್ಮ ಅವತರಿಸಿದ್ದರು. ಆ ಕಾಲದಲ್ಲಿಯೇ ಸಮಾಜ ಸುಧಾರಣೆಗೆ ಮುಂದೆ ಬಂದಿದ್ದರು. ಅವರ ಆತ್ಮಬಲ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಬೇಕು’ ಎಂದು ಆಶಿಸಿದರು.</p>.<p>‘ಸಮಸ್ಯೆಗಳನ್ನು ಎದುರಿಸಿ ಬದುಕುವುದೇ ನಿಜವಾದ ಜೀವನ. ಸಮಸ್ಯೆ, ಸಂಕಷ್ಟಗಳ ನಡುವೆಯೂ ಮಲ್ಲಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ’ ಎಂದರು.</p>.<p>‘ಇಂದಿನ ಯುವಪೀಳಿಗೆಯವರು ಹಿರಿಯರಿಂದ ಕಲಿಯಬೇಕಾದ ಸಂಸ್ಕಾರಗಳಿಂದ ವಂಚಿತವಾಗುತ್ತಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ ಮಾತನಾಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮೈತ್ರೇಯಿಣಿ ಗದಿಗೆಪ್ಪಗೌಡರ ಉಪನ್ಯಾಸ ನೀಡಿದರು.</p>.<p>ಡಿಸಿಪಿ ಯಶೋದಾ ವಂಟಗೋಡಿ, ಬೆಳಗಾವಿ ರೆಡ್ಡಿ ಸಂಘದ ಉಪಾಧ್ಯಕ್ಷ ಬಿ.ಎನ್. ಬಾವಲತ್ತಿ, ಎಸಿಪಿ ನಾರಾಯಣ ಭರಮನಿ, ಮುಖಂಡರಾದ ಶ್ರೀಕಾಂತ ಜಾಲಿಕಟ್ಟಿ, ಇಂದಿರಾ ಭೀಮರೆಡ್ಡಿ ಇದ್ದರು.</p>.<p>ಸುರೇಶ ಚಂದರಗಿ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಬಿ.ಎಸ್. ನಾಡಗೌಡರ ಪರಿಚಯಿಸಿದರು. ಹೇಮಾ ಪಾಟೀಲ ಹಾಗೂ ಶಶಿಕಲಾ ನಾಡಗೌಡ ನಿರೂಪಿಸಿದರು. ಎಸ್.ಯು. ಜಮಾದಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>