<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳು ಕ್ರಿಯಾಶೀಲತೆ ಬೆಳೆಸಿಕೊಂಡರೆ ಸರ್ವಾಂಗೀಣ ಉನ್ನತಿ ಸಾಧಿಸಬಹುದು’ ಎಂದು ಆರ್.ಪಿ.ಡಿ. ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷೆ ಬಿಂಬಾ ನಾಡಕರ್ಣಿ ಹೇಳಿದರು.</p>.<p>ಇಲ್ಲಿನ ರಾಣಿ ಪಾರ್ವತಿದೇವಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಎರಡು ದಿನಗಳ ಅಂತರಕಾಲೇಜು ವಿದ್ಯಾರ್ಥಿ ಯುವಜನೋತ್ಸವ ‘ಹೆರಿಟೇಜ್–2020‘ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ಜಗತ್ತು ಸ್ಪರ್ಧಾತ್ಮಕ ವಿದ್ಯಮಾನದಿಂದ ಕೂಡಿದೆ. ಇಂತಹ ಸಂಧರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಕೌಶಲಗಳನ್ನು ಬಳಸಿಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ವೇದಿಕೆಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.</p>.<p>‘ಸ್ಪರ್ಧೆಗಳಲ್ಲಿ ಸೋಲು– ಗೆಲುವು ಮುಖ್ಯವಲ್ಲ. ಪಾಲ್ಗೊಂಡು ಪ್ರತಿಭೆಯನ್ನು ಹೊರಹಾಕುವುದು ಅತ್ಯಂತ ಪ್ರಮುಖವಾಗಿದೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಎ.ಎ. ದೇಸಾಯಿ ಹೇಳಿದರು.</p>.<p>ಈ ಸಂದರ್ಭದಲ್ಲಿ‘ಹೆರಿಟೇಜ್’ ಕುರಿತಾದ ಕಿರುಚಿತ್ರ ಪ್ರದರ್ಶಿಸಲಾಯಿತು.ಕಾಲೇಜಿನ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಡಾ.ಎಚ್.ಬಿ. ಕೋಲಕಾರ ಇದ್ದರು.</p>.<p>ಸಂಜನಾ ಪೋವಾರ ಸ್ಪರ್ಧೆಯ ಮಾಹಿತಿ ನೀಡಿದರು. ಐಶ್ವರ್ಯಾ ಹೊಸೂರ ಸ್ವಾಗತಿಸಿದರು. ಧನಶ್ರೀ ಕೊರಾಟೆ ಪರಿಚಯಿಸಿದರು. ಸಲೋನಿ ಪಾಟೀಲ ಹಾಗೂ ದೇವಯಾನಿ ಶಾಹಪುರಕರ ನಿರೂಪಿಸಿದರು. ವಾಣಿ ಚಿನ್ನಪ್ಪಗೌಡರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳು ಕ್ರಿಯಾಶೀಲತೆ ಬೆಳೆಸಿಕೊಂಡರೆ ಸರ್ವಾಂಗೀಣ ಉನ್ನತಿ ಸಾಧಿಸಬಹುದು’ ಎಂದು ಆರ್.ಪಿ.ಡಿ. ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷೆ ಬಿಂಬಾ ನಾಡಕರ್ಣಿ ಹೇಳಿದರು.</p>.<p>ಇಲ್ಲಿನ ರಾಣಿ ಪಾರ್ವತಿದೇವಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಎರಡು ದಿನಗಳ ಅಂತರಕಾಲೇಜು ವಿದ್ಯಾರ್ಥಿ ಯುವಜನೋತ್ಸವ ‘ಹೆರಿಟೇಜ್–2020‘ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ಜಗತ್ತು ಸ್ಪರ್ಧಾತ್ಮಕ ವಿದ್ಯಮಾನದಿಂದ ಕೂಡಿದೆ. ಇಂತಹ ಸಂಧರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಕೌಶಲಗಳನ್ನು ಬಳಸಿಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ವೇದಿಕೆಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.</p>.<p>‘ಸ್ಪರ್ಧೆಗಳಲ್ಲಿ ಸೋಲು– ಗೆಲುವು ಮುಖ್ಯವಲ್ಲ. ಪಾಲ್ಗೊಂಡು ಪ್ರತಿಭೆಯನ್ನು ಹೊರಹಾಕುವುದು ಅತ್ಯಂತ ಪ್ರಮುಖವಾಗಿದೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಎ.ಎ. ದೇಸಾಯಿ ಹೇಳಿದರು.</p>.<p>ಈ ಸಂದರ್ಭದಲ್ಲಿ‘ಹೆರಿಟೇಜ್’ ಕುರಿತಾದ ಕಿರುಚಿತ್ರ ಪ್ರದರ್ಶಿಸಲಾಯಿತು.ಕಾಲೇಜಿನ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಡಾ.ಎಚ್.ಬಿ. ಕೋಲಕಾರ ಇದ್ದರು.</p>.<p>ಸಂಜನಾ ಪೋವಾರ ಸ್ಪರ್ಧೆಯ ಮಾಹಿತಿ ನೀಡಿದರು. ಐಶ್ವರ್ಯಾ ಹೊಸೂರ ಸ್ವಾಗತಿಸಿದರು. ಧನಶ್ರೀ ಕೊರಾಟೆ ಪರಿಚಯಿಸಿದರು. ಸಲೋನಿ ಪಾಟೀಲ ಹಾಗೂ ದೇವಯಾನಿ ಶಾಹಪುರಕರ ನಿರೂಪಿಸಿದರು. ವಾಣಿ ಚಿನ್ನಪ್ಪಗೌಡರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>