<p>ಸಂಕೇಶ್ವರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವವಾಗದಂತೆ ತಡೆಯಲು ಹಿಡಕಲ್ ಜಲಾಶಯದಿಂದ ತಾಂತ್ರಿಕ ಮಾರ್ಗಸೂಚಿಯಡಿ ವ್ಯವಸ್ಥಿತವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಿಖಿಲ ಕತ್ತಿ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.</p>.<p>ಹಿರಣ್ಯಕೇಶಿ ನದಿ ಪಾತ್ರದಲ್ಲಿ ನಿರ್ಮಿಸಲಾಗುತ್ತಿರುವ 5 ಬ್ಯಾರೇಜ್ಗಳನ್ನು ಭರ್ತಿ ಮಾಡುವ ಯೋಜನೆ ಪ್ರಸ್ತುತ ಪ್ರಗತಿಯಲ್ಲಿದೆ. ಈ ಕಾಮಗಾರಿ ಪೂರ್ಣಗೊಂಡರೆ ನದಿಯಲ್ಲಿ ಸದಾ ಕಾಲ ನೀರಿನ ಲಭ್ಯತೆ ಇರಲಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.</p>.<p>ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಕುಂದುಕೊರತೆ ಸಭೆಗಳು ಮುಕ್ತಾಯದ ಹಂತದಲ್ಲಿದ್ದು, ಬಾಕಿ ಇರುವ 7 ಹಳ್ಳಿಗಳಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು. ಇನ್ನು ಮುಂದೆ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಉದ್ದೇಶದಿಂದ ಪ್ರತಿ ಶುಕ್ರವಾರ ಸಂಕೇಶ್ವರದಲ್ಲಿ ಹಾಗೂ ಪ್ರತಿ ಸೋಮವಾರ ಹುಕ್ಕೇರಿಯಲ್ಲಿ ನಿಗದಿತವಾಗಿ ಸಾರ್ವಜನಿಕ ಸಂಪರ್ಕ ಸಭೆಗಳನ್ನು ನಡೆಸುವುದಾಗಿ ಶಾಸಕರು ಘೋಷಿಸಿದರು.</p>.<p>ಗಜಾನನ ಕ್ವಳ್ಳಿ, ಸುನೀಲ ಪರ್ವತರಾವ, ಶಿವಾನಂದ ಮುಡಶಿ, ಪ್ರಶಾಂತ ಪಾಟೀಲ, ಮಹಾದೇವ ಕ್ಷೀರಸಾಗರ, ಹರುಣ ಮುಲ್ಲಾ ಉಪಸ್ಥಿತರಿದ್ದರು. ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಪಿಎಸ್ಐ ಉಮೇಶ ಶೆಟ್ಟೆನ್ನವರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-21-1507234579</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಕೇಶ್ವರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವವಾಗದಂತೆ ತಡೆಯಲು ಹಿಡಕಲ್ ಜಲಾಶಯದಿಂದ ತಾಂತ್ರಿಕ ಮಾರ್ಗಸೂಚಿಯಡಿ ವ್ಯವಸ್ಥಿತವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಿಖಿಲ ಕತ್ತಿ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.</p>.<p>ಹಿರಣ್ಯಕೇಶಿ ನದಿ ಪಾತ್ರದಲ್ಲಿ ನಿರ್ಮಿಸಲಾಗುತ್ತಿರುವ 5 ಬ್ಯಾರೇಜ್ಗಳನ್ನು ಭರ್ತಿ ಮಾಡುವ ಯೋಜನೆ ಪ್ರಸ್ತುತ ಪ್ರಗತಿಯಲ್ಲಿದೆ. ಈ ಕಾಮಗಾರಿ ಪೂರ್ಣಗೊಂಡರೆ ನದಿಯಲ್ಲಿ ಸದಾ ಕಾಲ ನೀರಿನ ಲಭ್ಯತೆ ಇರಲಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.</p>.<p>ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಕುಂದುಕೊರತೆ ಸಭೆಗಳು ಮುಕ್ತಾಯದ ಹಂತದಲ್ಲಿದ್ದು, ಬಾಕಿ ಇರುವ 7 ಹಳ್ಳಿಗಳಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು. ಇನ್ನು ಮುಂದೆ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಉದ್ದೇಶದಿಂದ ಪ್ರತಿ ಶುಕ್ರವಾರ ಸಂಕೇಶ್ವರದಲ್ಲಿ ಹಾಗೂ ಪ್ರತಿ ಸೋಮವಾರ ಹುಕ್ಕೇರಿಯಲ್ಲಿ ನಿಗದಿತವಾಗಿ ಸಾರ್ವಜನಿಕ ಸಂಪರ್ಕ ಸಭೆಗಳನ್ನು ನಡೆಸುವುದಾಗಿ ಶಾಸಕರು ಘೋಷಿಸಿದರು.</p>.<p>ಗಜಾನನ ಕ್ವಳ್ಳಿ, ಸುನೀಲ ಪರ್ವತರಾವ, ಶಿವಾನಂದ ಮುಡಶಿ, ಪ್ರಶಾಂತ ಪಾಟೀಲ, ಮಹಾದೇವ ಕ್ಷೀರಸಾಗರ, ಹರುಣ ಮುಲ್ಲಾ ಉಪಸ್ಥಿತರಿದ್ದರು. ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಪಿಎಸ್ಐ ಉಮೇಶ ಶೆಟ್ಟೆನ್ನವರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-21-1507234579</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>