<p><strong>ಬೆಳಗಾವಿ</strong>: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಿರ್ಧರಿಸುತ್ತದೆ. ಕೆಪಿಸಿಸಿಗೆ ಪೂರ್ಣಪ್ರಮಾಣದ ಅಧ್ಯಕ್ಷ ಬೇಕು. ಮತ ಸೆಳೆಯುವವರು ಅಧ್ಯಕ್ಷರಾದರೆ ಮಾತ್ರ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ. ದೆಹಲಿಗೆ ಹೋಗಿ ಬಂದ ಬಳಿಕ ಈ ಬಗ್ಗೆ ಸುಳಿವು ಸಿಗಬಹುದು. ಚಳಿಗಾಲದ ಅಧಿವೇಶನದ ನಂತರ ದೆಹಲಿಗೆ ಹೋಗುವೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕೆಪಿಸಿಸಿ ಅಧ್ಯಕ್ಷರಾಗುವುದು ಸಾಮಾನ್ಯವಲ್ಲ. ಹೈಕಮಾಂಡ್ ಸೂಚನೆ ಬಂದ ಬಳಿಕ ಇದರ ಬಗ್ಗೆ ಚರ್ಚಿಸಬೇಕು. ಚರ್ಚೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಬೇಕು. ಅಧ್ಯಕ್ಷರ ಸ್ಥಾನಕ್ಕೆ ನಾಲ್ಕಾರು ಜನ ಸ್ಪರ್ಧೆಯಲ್ಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಿರ್ಧರಿಸುತ್ತದೆ. ಕೆಪಿಸಿಸಿಗೆ ಪೂರ್ಣಪ್ರಮಾಣದ ಅಧ್ಯಕ್ಷ ಬೇಕು. ಮತ ಸೆಳೆಯುವವರು ಅಧ್ಯಕ್ಷರಾದರೆ ಮಾತ್ರ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ. ದೆಹಲಿಗೆ ಹೋಗಿ ಬಂದ ಬಳಿಕ ಈ ಬಗ್ಗೆ ಸುಳಿವು ಸಿಗಬಹುದು. ಚಳಿಗಾಲದ ಅಧಿವೇಶನದ ನಂತರ ದೆಹಲಿಗೆ ಹೋಗುವೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕೆಪಿಸಿಸಿ ಅಧ್ಯಕ್ಷರಾಗುವುದು ಸಾಮಾನ್ಯವಲ್ಲ. ಹೈಕಮಾಂಡ್ ಸೂಚನೆ ಬಂದ ಬಳಿಕ ಇದರ ಬಗ್ಗೆ ಚರ್ಚಿಸಬೇಕು. ಚರ್ಚೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಬೇಕು. ಅಧ್ಯಕ್ಷರ ಸ್ಥಾನಕ್ಕೆ ನಾಲ್ಕಾರು ಜನ ಸ್ಪರ್ಧೆಯಲ್ಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>