ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಮ್ಮ ದೇಗುಲ ಆವರಣದಲ್ಲಿ ಕಟ್ಟಡ: ಹೈಕೋರ್ಟ್ ಶೋಕಾಸ್ ನೋಟಿಸ್

Last Updated 15 ಡಿಸೆಂಬರ್ 2020, 5:33 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿಯ ರೇಣುಕಾ ಎಲ್ಲಮ್ಮ ದೇವಿ ದೇವಾಲಯದ‌ ಆವರಣದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ ಸಂಬಂಧ ದೇವಸ್ಥಾನ‌ದ ಕಾರ್ಯ ನಿರ್ವಹಣಾಧಿಕಾರಿಗೆ ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬೈಲಹೊಂಗಲದ ಮಹೇಂದ್ರಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ,‌‌ ‘ಕಟ್ಟಡಗಳ ನಿರ್ಮಾಣಕ್ಕೆ ಅ.12ರಂದು ತಡೆಯಾಜ್ಞೆ ನೀಡಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ. ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಬಾರದೇಕೆ ಎನ್ನುವ ಬಗ್ಗೆ ವಿವರಣೆ ನೀಡಬೇಕು’ ಎಂದು ತಿಳಿಸಿದೆ.

‘ಕಾಮಗಾರಿ ನಡೆಸಿಲ್ಲ ಎಂಬುದಾಗಿ ಕಾರ್ಯ ನಿರ್ವಹಣಾಧಿಕಾರಿ ಹೇಳುತ್ತಿದ್ದಾರೆ. ಹೀಗಾಗಿ, ತಹಶೀಲ್ದಾರ್ ದರ್ಜೆಯ ಅಧಿಕಾರಿಯಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಬೆಳಗಾವಿ ಜಿಲ್ಲಾಧಿಕಾರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು 2021ರ ಜ.18ಕ್ಕೆ ಮುಂದೂಡಿತು.

ಕಾಮಗಾರಿ ನಡೆಯುತ್ತಿರುವ ಕುರಿತ ಫೋಟೊಗಳನ್ನು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಕಾರ್ಯನಿರ್ವಹಣಾಧಿಕಾರಿ ಪರ ವಕೀಲರು ಇದಕ್ಕೆ ಆಕ್ಷೇಪಿಸಿ, ಇದನ್ನು ಪ್ರಮಾಣೀಕರಿಸಿ ಪ್ರಮಾಣಪತ್ರ ಸಹ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

‘ಪುರಾತನವಾದ ಈ ದೇವಾಲಯ ಪುರಾತತ್ವ ಇಲಾಖೆ ಸಂರಕ್ಷಿತ ಸ್ಮಾರಕ ಎಂದು ಘೋಷಿಸಿದೆ. ನಿಯಮದಂತೆ 100 ಮೀಟರ್ ಸುತ್ತಳತೆಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಆದರೂ, ನಿಯಮಾವಳಿ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಿಸಲಾಗುತ್ತಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT