ಬೆಳಗಾವಿ: ಉಡುಪಿ ಜಿಲ್ಲೆಯ ಕುಂದಾಪುರದ ಕೆಲವು ಕಾಲೇಜುಗಳ ವಿದ್ಯಾರ್ಥಿನಿಯರು ಹಿಜಾಬ್, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದು ವಿವಾದ ಸೃಷ್ಟಿಯಾಗಿರುವ ನಡುವೆಯೇ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೂಡ ಕೇಸರಿ ಶಾಲು ಹಾಕಿಕೊಂಡು ಹಾಜರಾಗಿದ್ದಾರೆ. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.