ಈ ಹುದ್ದೆಯಲ್ಲಿ 3 ವರ್ಷ 9 ತಿಂಗಳು ಕಾರ್ಯನಿರ್ವಹಿಸಿದ್ದ ಟಿ.ಪಿ. ಶೇಷ ಕಾರಾಗೃಹಗಳ ಉಪಮಹಾನಿರೀಕ್ಷಕರ ಹುದ್ದೆಗೆ ಬಡ್ತಿ ಪಡೆದು ಬೆಂಗಳೂರಿಗೆ ವರ್ಗವಾಗಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಕೃಷ್ಣಕುಮಾರ್ ಅವರನ್ನು ಕಲಬುರ್ಗಿಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಸನ್ಮಾನಿಸಿ, ಆತ್ಮೀಯವಾಗಿ ಸ್ವಾಗತಿಸಿದರು.