<p><strong>ವಾಡಿ:</strong>ಸತತ ಮಳೆಯಿಂದ ಮುಂಗಾರು ಭಾರಿ ಪ್ರಮಾಣದಲ್ಲಿ ಬೆಳೆಗಳು ಹಾನಿಗೊಳಗಾಗಿದ್ದು, ಈಗ ರೈತರು ಹಿಂಗಾರು ಬಿತ್ತನೆಯತ್ತ ಚಿತ್ತ ನೆಟ್ಟಿದ್ದಾರೆ.</p>.<p>ಅತಿ ಹೆಚ್ಚು ಕೆಂಪು ಮಸಾರಿ ಜಮೀನು ಇರುವ ನಾಲವಾರ ವಲಯದಲ್ಲಿ ಶೇಂಗಾ ಬೀಜಕ್ಕಾಗಿ ಬೇಡಿಕೆ ಹೆಚ್ಚುತ್ತಿದೆ. ನೀರಾವರಿ ಆಶ್ರಿತ ರೈತರು ಹಿಂಗಾರು ಬಿತ್ತನೆಗಾಗಿ ಶೇಂಗಾ ಬೆಳೆಯತ್ತ ಆಸಕ್ತಿ ವಹಿಸಿದ್ದು, ಬೀಜಕ್ಕಾಗಿ ಕೃಷಿ ಕಚೇರಿಗಳಿಗೆ ಮುಗಿ ಬೀಳುತ್ತಿದ್ದಾರೆ.</p>.<p>ನಾಲವಾರ ರೈತ ಸಂಪರ್ಕ ಕೇಂದ್ರಕ್ಕೆ ಪ್ರತಿನಿತ್ಯ ಹತ್ತಾರು ರೈತರು ಭೇಟಿ ನೀಡಿ ಬೀಜಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದಾರೆ. ಈ ವಲಯದಲ್ಲಿ ಈ ಬಾರಿ 5,500 ಹೆಕ್ಟೆರ್ ಪ್ರದೇಶದಲ್ಲಿ ಶೇಂಗಾ ಬೆಳೆ ಬಿತ್ತನೆಯ ನಿರೀಕ್ಷೆ ಹೊಂದಲಾಗಿದೆ. ಕಳೆದ ವರ್ಷ 3,500 ಹೆಕ್ಟೆರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲಾಗಿತ್ತು. ಈ ವರ್ಷ ಅತಿ ಹೆಚ್ಚು ಮಳೆ ಸುರಿದಿದ್ದು, ಕೆರೆ ಕಟ್ಟೆಗಳು ತುಂಬಿವೆ. ಬೋರ್ವೆಲ್ಗಳ ಅಂತರ್ಜಲ ಮಟ್ಟ ಹೆಚ್ಚಿದ್ದು, ಶೆಂಗಾ ಬಿತ್ತನೆ ಕ್ಷೇತ್ರ ಹೆಚ್ಚಳ ಸಾಧ್ಯತೆಗೆ ಕಾರಣವಾಗಿದೆ.</p>.<p>‘ಮಳೆಯಿಂದ ಮುಂಗಾರು ಹೆಸರು ಬೆಳೆ ಹಾಳಾಗಿ ಹೋಗಿದೆ. ಈಗ 8 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲು ಉದ್ದೇಶಿಸಿದ್ದೇನೆ. ವಾರದಿಂದ ಕಚೇರಿಗೆ ಬರುತ್ತಿದ್ದೇನೆ. ಬೆಲೆ ನಿರ್ಧಾರವಾದ ಬಳಿಕ ಬೀಜ ವಿತರಣೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ರಮೇಶ ಶಿವನಗರ ಹಾಗೂ ಶರಣಪ್ಪ ಕಂಚಗಾರಹಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಳೆದ ವರ್ಷ ಶೇಂಗಾ ಬೀಜದ ಸಮಸ್ಯೆ ರೈತರಿಗೆ ವಿಪರೀತವಾಗಿ ಕಾಡಿತ್ತು. ಬೀಜಕ್ಕಾಗಿ ರೈತರು ರೈತ ಸಂಪರ್ಕಗಳ ಮುಂದೆ ಹಲವು ದಿನಗಳ ಕಾಲ ಸಾಲುಗಟ್ಟಿ ನಿಂತಿದ್ದರು. ರಾತ್ರಿಯಿಡೀ ಜಾಗರಣೆ ಮಾಡಿದ್ದರು. ಕೃಷಿ ಕಚೇರಿಗಳ ಮುಂದೆ ರೈತರಿಂದ ಪ್ರತಿಭಟನೆಗಳು ನಡೆದಿದ್ದವು. ಕಳೆದ ವರ್ಷಕ್ಕಿಂತ ಈ ವರ್ಷ ಶೆಂಗಾ ಬೀಜದ ಬೇಡಿಕೆ ದುಪ್ಪಟ್ಟು ಆಗಿದ್ದು, ಕೃಷಿ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಬೀಜ ದಾಸ್ತಾನಿಗೆ ಕ್ರಮ ಕೈಗೊಳ್ಳಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong>ಸತತ ಮಳೆಯಿಂದ ಮುಂಗಾರು ಭಾರಿ ಪ್ರಮಾಣದಲ್ಲಿ ಬೆಳೆಗಳು ಹಾನಿಗೊಳಗಾಗಿದ್ದು, ಈಗ ರೈತರು ಹಿಂಗಾರು ಬಿತ್ತನೆಯತ್ತ ಚಿತ್ತ ನೆಟ್ಟಿದ್ದಾರೆ.</p>.<p>ಅತಿ ಹೆಚ್ಚು ಕೆಂಪು ಮಸಾರಿ ಜಮೀನು ಇರುವ ನಾಲವಾರ ವಲಯದಲ್ಲಿ ಶೇಂಗಾ ಬೀಜಕ್ಕಾಗಿ ಬೇಡಿಕೆ ಹೆಚ್ಚುತ್ತಿದೆ. ನೀರಾವರಿ ಆಶ್ರಿತ ರೈತರು ಹಿಂಗಾರು ಬಿತ್ತನೆಗಾಗಿ ಶೇಂಗಾ ಬೆಳೆಯತ್ತ ಆಸಕ್ತಿ ವಹಿಸಿದ್ದು, ಬೀಜಕ್ಕಾಗಿ ಕೃಷಿ ಕಚೇರಿಗಳಿಗೆ ಮುಗಿ ಬೀಳುತ್ತಿದ್ದಾರೆ.</p>.<p>ನಾಲವಾರ ರೈತ ಸಂಪರ್ಕ ಕೇಂದ್ರಕ್ಕೆ ಪ್ರತಿನಿತ್ಯ ಹತ್ತಾರು ರೈತರು ಭೇಟಿ ನೀಡಿ ಬೀಜಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದಾರೆ. ಈ ವಲಯದಲ್ಲಿ ಈ ಬಾರಿ 5,500 ಹೆಕ್ಟೆರ್ ಪ್ರದೇಶದಲ್ಲಿ ಶೇಂಗಾ ಬೆಳೆ ಬಿತ್ತನೆಯ ನಿರೀಕ್ಷೆ ಹೊಂದಲಾಗಿದೆ. ಕಳೆದ ವರ್ಷ 3,500 ಹೆಕ್ಟೆರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲಾಗಿತ್ತು. ಈ ವರ್ಷ ಅತಿ ಹೆಚ್ಚು ಮಳೆ ಸುರಿದಿದ್ದು, ಕೆರೆ ಕಟ್ಟೆಗಳು ತುಂಬಿವೆ. ಬೋರ್ವೆಲ್ಗಳ ಅಂತರ್ಜಲ ಮಟ್ಟ ಹೆಚ್ಚಿದ್ದು, ಶೆಂಗಾ ಬಿತ್ತನೆ ಕ್ಷೇತ್ರ ಹೆಚ್ಚಳ ಸಾಧ್ಯತೆಗೆ ಕಾರಣವಾಗಿದೆ.</p>.<p>‘ಮಳೆಯಿಂದ ಮುಂಗಾರು ಹೆಸರು ಬೆಳೆ ಹಾಳಾಗಿ ಹೋಗಿದೆ. ಈಗ 8 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲು ಉದ್ದೇಶಿಸಿದ್ದೇನೆ. ವಾರದಿಂದ ಕಚೇರಿಗೆ ಬರುತ್ತಿದ್ದೇನೆ. ಬೆಲೆ ನಿರ್ಧಾರವಾದ ಬಳಿಕ ಬೀಜ ವಿತರಣೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ’ ಎಂದು ರಮೇಶ ಶಿವನಗರ ಹಾಗೂ ಶರಣಪ್ಪ ಕಂಚಗಾರಹಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಳೆದ ವರ್ಷ ಶೇಂಗಾ ಬೀಜದ ಸಮಸ್ಯೆ ರೈತರಿಗೆ ವಿಪರೀತವಾಗಿ ಕಾಡಿತ್ತು. ಬೀಜಕ್ಕಾಗಿ ರೈತರು ರೈತ ಸಂಪರ್ಕಗಳ ಮುಂದೆ ಹಲವು ದಿನಗಳ ಕಾಲ ಸಾಲುಗಟ್ಟಿ ನಿಂತಿದ್ದರು. ರಾತ್ರಿಯಿಡೀ ಜಾಗರಣೆ ಮಾಡಿದ್ದರು. ಕೃಷಿ ಕಚೇರಿಗಳ ಮುಂದೆ ರೈತರಿಂದ ಪ್ರತಿಭಟನೆಗಳು ನಡೆದಿದ್ದವು. ಕಳೆದ ವರ್ಷಕ್ಕಿಂತ ಈ ವರ್ಷ ಶೆಂಗಾ ಬೀಜದ ಬೇಡಿಕೆ ದುಪ್ಪಟ್ಟು ಆಗಿದ್ದು, ಕೃಷಿ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಬೀಜ ದಾಸ್ತಾನಿಗೆ ಕ್ರಮ ಕೈಗೊಳ್ಳಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>