ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಲಹೊಂಗಲ|ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಬಾಬಾಸಾಹೇಬ ಪಾಟೀಲ

Published 4 ಜೂನ್ 2023, 14:02 IST
Last Updated 4 ಜೂನ್ 2023, 14:02 IST
ಅಕ್ಷರ ಗಾತ್ರ

ಬೈಲಹೊಂಗಲ: ‘ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಚನ್ನಮ್ಮ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲ್ಲೂಕು ಎನ್.ಪಿ.ಎಸ್ ನೌಕರರ ಸಂಘದ ವತಿಯಿಂದ ಶನಿವಾರ ನಡೆದ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

‘ಬೈಲಹೊಂಗಲ ಹಾಗೂ ಚನ್ನಮ್ಮ ಕಿತ್ತೂರು ತಾಲ್ಲೂಕಿನ ಎಲ್ಲ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾನು ಅವರ ಬೇಕು ಬೇಡಗಳ ಬಗ್ಗೆ ಚನ್ನಾಗಿ ಅರಿತಿದ್ದು, ಅವರ ಸಮಸ್ಯೆಗಳ ನಿವಾರಣೆಗೆ ಒತ್ತು ನೀಡುವುದಾಗಿ’ ತಿಳಿಸಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಎಸ್.ಡಿ.ಗಂಗನ್ನವರ ಶಿಕ್ಷಕರು ಬಹಳ ದಿನಗಳಿಂದ ಎದುರಿಸುತ್ತಿರುವ ಹಲವು ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು. ಬೈಲಹೊಂಗಲ ಬಿಇಒ ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿಂದ ತುರ್ತು ಕೆಲಸಗಳು ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಹೊಸ ಸಿಬ್ಬಂದಿ ನೇಮಕಗೊಳಿಸಲು ಪ್ರಯತ್ನಿಸಬೇಕು. ಪಟ್ಟಣದಲ್ಲಿ ಗುರುಭವನ ನಿರ್ಮಾಣಕ್ಕೆ ಅನುದಾನ ಕೊಡಿಸಬೇಕೆಂದು ಮನವಿ ಮಾಡಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಇಸ್ಮಾಯಿಲ ತಿಗಡಿ, ಉಪಾಧ್ಯಕ್ಷೆ ಹೇಮಾ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಅರ್ಜುನ ಕೋಣಿನನವರ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರು ಭಜಂತ್ರಿ, ಗೌರವ ಅಧ್ಯಕ್ಷ ಬಿ.ವಿ.ಬಾನಿ, ಅಂಬರಶೆಟ್ಟಿ, ಶಿಕ್ಷಣ ಸಂಯೋಜಕ ಅಮೀರ್‌ಅಹ್ಮದ ನರಸನ್ನವರ, ದಾಸನಕೊಪ್ಪ, ಎಸ್.ಎಸ್ ಪಾಟೀಲ್, ಬಸನಗೌಡ ತಿಗಡಿ, ಗುರುರಾಜ ಬೋಳನ್ನವರ, ರಾಜು ರುದ್ರನಾಯ್ಕರ, ರಾಮಣ್ಣ ತೋರಣಗಟ್ಟಿ ವಿಜಯ ಹುಣಶೀಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT