<p><strong>ಮೂಡಲಗಿ</strong>: ‘ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರಭಾವಿ ಕ್ಷೇತ್ರದಲ್ಲಿ ಅಧಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇದರಿಂದ ಶಿಕ್ಷಣದ ಗುಣಮಟ್ಟವು ಸುಧಾರಣೆಯಾಗಿದೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.</p>.<p>ತಾಲ್ಲೂಕಿನ ಸುಣಧೋಳಿಯ ಬಳೋಲ ಮಡ್ಡಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನದ ಅಡಿಯಲ್ಲಿ ಅಂದಾಜು ₹16 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ್ದರ ಫಲವಾಗಿ ಪ್ರತಿ ಗ್ರಾಮವು ಶೈಕ್ಷಣಿಕವಾಗಿ ಪ್ರಗತಿಯತ್ತ ಸಾಗಿದೆ ಮತ್ತು ಅರಭಾವಿ ಕ್ಷೇತ್ರವು ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ ಎಂದರು.</p>.<p>ಹಿಂದುಳಿದ, ಅಲ್ಪ ಸಂಖ್ಯಾತರ, ಪರಿಶಿಷ್ಟ ಜಾತಿ, ಪಂಗಡಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಅರಭಾವಿ ಕ್ಷೇತ್ರದಲ್ಲಿ ಈ ವರೆಗೆ 13 ವಿವಿಧ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಗ್ರಾಮೀಣ ಮಕ್ಕಳು ಇಂಥ ವಸತಿ ಶಾಲೆಗಳಿಂದ ತಮ್ಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಬಹಳಷ್ಟು ಉಪಯುಕ್ತವಾಗಿವೆ ಎಂದರು.</p>.<p>ಬರುವ ನವೆಂಬರ್ ತಿಂಗಳಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗಲಿದ್ದು, ರೈತರು ಸಾಗಿಸುವ ಕಬ್ಬಿನ ಸಾರಿಗೆಗೆ ಅನುಕೂಲವಾಗುವ ದೃಷ್ಟಿಯಿಂದ ಅಗತ್ಯವಿರುವಲ್ಲಿ ರಸ್ತೆಗಳ ಸುಧಾರಣೆ ಮಾಡಲಾಗುತ್ತಿದೆ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಾಕಷ್ಟು ಸುಧಾರಣೆ ಕಾಮಗಾರಿಗಳನ್ನು ಮಾಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆ ಇದ್ದಾಗ್ಯೂ ಸಹ ಪ್ರಯತ್ನ ಮಾಡಿ ಅವಶ್ಯವಿರುವಲ್ಲಿ ಸುಧಾರಣೆಯ ಕಾರ್ಯ ಮಾಡಲಾಗುತ್ತಿದೆ ಎಂದರು.</p>.<p>ಈ ಸಂದರ್ಭದಲ್ಲಿ ಸುಣಧೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಪ್ಪ ಅಮಣಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಫಕೀರಪ್ಪ ಪೂಜೇರಿ, ತಾಲ್ಲೂಕು ಅಧಿಕಾರಿ ಹಿರೇಮಠ, ಬಿಇಒ ಪಿ.ಬಿ.ಹಿರೇಮಠ, ಸುಣಧೋಳಿ- ಲಕ್ಷ್ಮೇಶ್ವರ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅರಭಾವಿ ಕ್ಷೇತ್ರದಲ್ಲಿ ಅಧಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇದರಿಂದ ಶಿಕ್ಷಣದ ಗುಣಮಟ್ಟವು ಸುಧಾರಣೆಯಾಗಿದೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.</p>.<p>ತಾಲ್ಲೂಕಿನ ಸುಣಧೋಳಿಯ ಬಳೋಲ ಮಡ್ಡಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನದ ಅಡಿಯಲ್ಲಿ ಅಂದಾಜು ₹16 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ್ದರ ಫಲವಾಗಿ ಪ್ರತಿ ಗ್ರಾಮವು ಶೈಕ್ಷಣಿಕವಾಗಿ ಪ್ರಗತಿಯತ್ತ ಸಾಗಿದೆ ಮತ್ತು ಅರಭಾವಿ ಕ್ಷೇತ್ರವು ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ ಎಂದರು.</p>.<p>ಹಿಂದುಳಿದ, ಅಲ್ಪ ಸಂಖ್ಯಾತರ, ಪರಿಶಿಷ್ಟ ಜಾತಿ, ಪಂಗಡಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ಉದ್ದೇಶದಿಂದ ಅರಭಾವಿ ಕ್ಷೇತ್ರದಲ್ಲಿ ಈ ವರೆಗೆ 13 ವಿವಿಧ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಗ್ರಾಮೀಣ ಮಕ್ಕಳು ಇಂಥ ವಸತಿ ಶಾಲೆಗಳಿಂದ ತಮ್ಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಬಹಳಷ್ಟು ಉಪಯುಕ್ತವಾಗಿವೆ ಎಂದರು.</p>.<p>ಬರುವ ನವೆಂಬರ್ ತಿಂಗಳಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗಲಿದ್ದು, ರೈತರು ಸಾಗಿಸುವ ಕಬ್ಬಿನ ಸಾರಿಗೆಗೆ ಅನುಕೂಲವಾಗುವ ದೃಷ್ಟಿಯಿಂದ ಅಗತ್ಯವಿರುವಲ್ಲಿ ರಸ್ತೆಗಳ ಸುಧಾರಣೆ ಮಾಡಲಾಗುತ್ತಿದೆ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಾಕಷ್ಟು ಸುಧಾರಣೆ ಕಾಮಗಾರಿಗಳನ್ನು ಮಾಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆ ಇದ್ದಾಗ್ಯೂ ಸಹ ಪ್ರಯತ್ನ ಮಾಡಿ ಅವಶ್ಯವಿರುವಲ್ಲಿ ಸುಧಾರಣೆಯ ಕಾರ್ಯ ಮಾಡಲಾಗುತ್ತಿದೆ ಎಂದರು.</p>.<p>ಈ ಸಂದರ್ಭದಲ್ಲಿ ಸುಣಧೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಪ್ಪ ಅಮಣಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಫಕೀರಪ್ಪ ಪೂಜೇರಿ, ತಾಲ್ಲೂಕು ಅಧಿಕಾರಿ ಹಿರೇಮಠ, ಬಿಇಒ ಪಿ.ಬಿ.ಹಿರೇಮಠ, ಸುಣಧೋಳಿ- ಲಕ್ಷ್ಮೇಶ್ವರ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>