<p><strong>ಚಿಕ್ಕೋಡಿ:</strong> ಪಟ್ಟಣದಿಂದ 4 ಕಿ.ಮೀ ದೂರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ವಸತಿನಿಲಯ ವ್ಯವಸ್ಥೆ ಇಲ್ಲ. ಇದೇ ಕಾರಣಕ್ಕೆ ಪ್ರತಿ ವರ್ಷ ನೂರಾರು ವಿದ್ಯಾರ್ಥಿನಿಯರು ಉಚಿತ ಕೌಶಲ ತರಬೇತಿಯಿಂದ ವಂಚಿತರಾಗುತ್ತಿದ್ದಾರೆ.</p>.<p>ಕೇಂದ್ರ ಬಸ್ ನಿಲ್ದಾಣದಿಂದ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ತರಗತಿಗೆ ಹಾಜರಾಗಲು ವಿದ್ಯಾರ್ಥಿನಿಯರು ಪರದಾಡುವಂತಾಗಿದೆ.</p>.<p>2018ರಲ್ಲಿ ಪ್ರಾರಂಭವಾಗಿರುವ ಜಿಟಿಟಿಸಿ ಕೇಂದ್ರದಲ್ಲಿ ತರಬೇತಿ ಪಡೆಯಲು ಅತ್ಯಾಧುನಿಕ ಯಂತ್ರೋಪಕರಣ, ತರಗತಿ ಕೋಣೆ, ಸಭಾಂಗಣ, ಬಾಲಕರ ವಸತಿ ನಿಲಯವಿದ್ದು, ಬಾಲಕಿಯರಿಗೆ ವಸತಿ ನಿಲಯ ಸೌಲಭ್ಯವಿಲ್ಲ.</p>.<p>ಕೇಂದ್ರದಲ್ಲಿ ಪ್ರತಿ ವರ್ಷ ಪೂರ್ಣಾವಧಿ ಕೋರ್ಸ್ ತರಬೇತಿ ಪಡೆಯಲು 60 ವಿದ್ಯಾರ್ಥಿನಿಯರು (ಶೇ 33 ಮಹಿಳಾ ಮೀಸಲಾತಿ) ಸೇರಿದಂತೆ 180 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಅಲ್ಪಾವಧಿಯ ಹಲವು ಕೋರ್ಸ್ಗಳು ಇಲ್ಲಿ ಲಭ್ಯವಿವೆ.</p>.<p>ಕೇಂದ್ರದಲ್ಲಿ 3 ವರ್ಷ ತರಬೇತಿ ಹಾಗೂ 1 ವರ್ಷ ಕಡ್ಡಾಯ ಕೈಗಾರಿಕಾ ತರಬೇತಿ ಒಳಗೊಂಡ ಪೂರ್ಣಾವಧಿಯ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಫ್ರೀಸಿಜನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ ಕೋರ್ಸ್ಗಳಿವೆ.</p>.<p>ಕಳೆದ ಮೂರು ವರ್ಷಗಳಲ್ಲಿ ಪೂರ್ಣಾವಧಿ ಕೋರ್ಸ್ ಪೂರೈಸಿದ 520 ವಿದ್ಯಾರ್ಥಿಗಳು ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ ಪ್ರಾರಂಭವಾಗಿರುವ ಜಿಟಿಟಿಸಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ.</p>.<p>ಒಂದೆಡೆ ವಸತಿ ನಿಲಯ ಸೌಲಭ್ಯವೂ ಇಲ್ಲ, ಇನ್ನೊಂದೆಡೆ ಬಸ್ ಸೌಕರ್ಯವೂ ಇಲ್ಲ. ಇದರಿಂದ ಗ್ರಾಮೀಣ ವಿದ್ಯಾರ್ಥಿನಿಯರು ಅವಕಾಶ ವಂಚಿತರಾಗುತ್ತಿದ್ದಾರೆ.</p>.<div><blockquote>ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಹಾಗೂ ಬಸ್ ಸೌಕರ್ಯವಿಲ್ಲದೇ ಉಚಿತ ತರಬೇತಿ ಪಡೆದುಕೊಳ್ಳಲು ಪರದಾಡುತ್ತಿದ್ದೇವೆ. ಹಾಸ್ಟೆಲ್ ಮಂಜೂರು ಮಾಡಿ. </blockquote><span class="attribution">-ರುಕ್ಸಾರಬಾನು ಕಾಲೆಖಾಜಿ, ಮೆಕಾಟ್ರಾನಿಕ್ಸ್ ಕೋರ್ಸ್ ವಿದ್ಯಾರ್ಥಿನಿ</span></div>.<div><blockquote>ಬಾಲಕಿಯರ ಹಾಸ್ಟೆಲ್ ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಶೀಘ್ರದಲ್ಲಿ ವಸತಿ ನಿಲಯ ಪ್ರಾರಂಭಗೊಳ್ಳುವ ನಿರೀಕ್ಷೆ ಇದೆ </blockquote><span class="attribution">-ಶೀತಲಕುಮಾರ ದೇವಲಾಪೂರ, ಪ್ರಾಚಾರ್ಯ ಜಿಟಿಟಿಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ಪಟ್ಟಣದಿಂದ 4 ಕಿ.ಮೀ ದೂರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ವಸತಿನಿಲಯ ವ್ಯವಸ್ಥೆ ಇಲ್ಲ. ಇದೇ ಕಾರಣಕ್ಕೆ ಪ್ರತಿ ವರ್ಷ ನೂರಾರು ವಿದ್ಯಾರ್ಥಿನಿಯರು ಉಚಿತ ಕೌಶಲ ತರಬೇತಿಯಿಂದ ವಂಚಿತರಾಗುತ್ತಿದ್ದಾರೆ.</p>.<p>ಕೇಂದ್ರ ಬಸ್ ನಿಲ್ದಾಣದಿಂದ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ತರಗತಿಗೆ ಹಾಜರಾಗಲು ವಿದ್ಯಾರ್ಥಿನಿಯರು ಪರದಾಡುವಂತಾಗಿದೆ.</p>.<p>2018ರಲ್ಲಿ ಪ್ರಾರಂಭವಾಗಿರುವ ಜಿಟಿಟಿಸಿ ಕೇಂದ್ರದಲ್ಲಿ ತರಬೇತಿ ಪಡೆಯಲು ಅತ್ಯಾಧುನಿಕ ಯಂತ್ರೋಪಕರಣ, ತರಗತಿ ಕೋಣೆ, ಸಭಾಂಗಣ, ಬಾಲಕರ ವಸತಿ ನಿಲಯವಿದ್ದು, ಬಾಲಕಿಯರಿಗೆ ವಸತಿ ನಿಲಯ ಸೌಲಭ್ಯವಿಲ್ಲ.</p>.<p>ಕೇಂದ್ರದಲ್ಲಿ ಪ್ರತಿ ವರ್ಷ ಪೂರ್ಣಾವಧಿ ಕೋರ್ಸ್ ತರಬೇತಿ ಪಡೆಯಲು 60 ವಿದ್ಯಾರ್ಥಿನಿಯರು (ಶೇ 33 ಮಹಿಳಾ ಮೀಸಲಾತಿ) ಸೇರಿದಂತೆ 180 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಅಲ್ಪಾವಧಿಯ ಹಲವು ಕೋರ್ಸ್ಗಳು ಇಲ್ಲಿ ಲಭ್ಯವಿವೆ.</p>.<p>ಕೇಂದ್ರದಲ್ಲಿ 3 ವರ್ಷ ತರಬೇತಿ ಹಾಗೂ 1 ವರ್ಷ ಕಡ್ಡಾಯ ಕೈಗಾರಿಕಾ ತರಬೇತಿ ಒಳಗೊಂಡ ಪೂರ್ಣಾವಧಿಯ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಫ್ರೀಸಿಜನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ ಕೋರ್ಸ್ಗಳಿವೆ.</p>.<p>ಕಳೆದ ಮೂರು ವರ್ಷಗಳಲ್ಲಿ ಪೂರ್ಣಾವಧಿ ಕೋರ್ಸ್ ಪೂರೈಸಿದ 520 ವಿದ್ಯಾರ್ಥಿಗಳು ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ ಪ್ರಾರಂಭವಾಗಿರುವ ಜಿಟಿಟಿಸಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ.</p>.<p>ಒಂದೆಡೆ ವಸತಿ ನಿಲಯ ಸೌಲಭ್ಯವೂ ಇಲ್ಲ, ಇನ್ನೊಂದೆಡೆ ಬಸ್ ಸೌಕರ್ಯವೂ ಇಲ್ಲ. ಇದರಿಂದ ಗ್ರಾಮೀಣ ವಿದ್ಯಾರ್ಥಿನಿಯರು ಅವಕಾಶ ವಂಚಿತರಾಗುತ್ತಿದ್ದಾರೆ.</p>.<div><blockquote>ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಹಾಗೂ ಬಸ್ ಸೌಕರ್ಯವಿಲ್ಲದೇ ಉಚಿತ ತರಬೇತಿ ಪಡೆದುಕೊಳ್ಳಲು ಪರದಾಡುತ್ತಿದ್ದೇವೆ. ಹಾಸ್ಟೆಲ್ ಮಂಜೂರು ಮಾಡಿ. </blockquote><span class="attribution">-ರುಕ್ಸಾರಬಾನು ಕಾಲೆಖಾಜಿ, ಮೆಕಾಟ್ರಾನಿಕ್ಸ್ ಕೋರ್ಸ್ ವಿದ್ಯಾರ್ಥಿನಿ</span></div>.<div><blockquote>ಬಾಲಕಿಯರ ಹಾಸ್ಟೆಲ್ ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಶೀಘ್ರದಲ್ಲಿ ವಸತಿ ನಿಲಯ ಪ್ರಾರಂಭಗೊಳ್ಳುವ ನಿರೀಕ್ಷೆ ಇದೆ </blockquote><span class="attribution">-ಶೀತಲಕುಮಾರ ದೇವಲಾಪೂರ, ಪ್ರಾಚಾರ್ಯ ಜಿಟಿಟಿಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>