<p><strong>ಉಗರಗೋಳ</strong>: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಗುರುವಾರ ಜಾತ್ರೆ ನಡೆಯಿತು. ಕರ್ನಾಟಕ, ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರು, ಶ್ರದ್ಧೆಯಿಂದ ಧಾರ್ಮಿಕ ಆಚರಣೆ ಕೈಗೊಂಡರು. </p>.<p>ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಬುಧವಾರ ಯಲ್ಲಮ್ಮ ದೇವಿಯ ಕಂಕಣ ಮಂಗಳಸೂತ್ರ ವಿಸರ್ಜನೋತ್ಸವ ಕಾರ್ಯಕ್ರಮ ನಡೆದಿತ್ತು. ಹೂಲಿಯ ಹಿರೇಮಠದ ಅಜ್ಜಯ್ಯ ಶಾಸ್ತ್ರಿ ವೈದಿಕತ್ವದಲ್ಲಿ ಗುರುವಾರ ಮಹಾಯಜ್ಞ ವಿಧಿವತ್ತಾಗಿ ನೆರವೇರಿತು.</p>.<p>ಯಲ್ಲಮ್ಮ ದೇವಿ ತವರಾದ ಹರಳಕಟ್ಟಿಯಿಂದ ಹಿರಿಯರು ಸೀರೆ, ಕುಪ್ಪಸ, ಬಳೆಗಳು, ಅರಿಸಿಣ, ಕುಂಕುಮ ತಂದು, ಧಾರ್ಮಿಕ ವಿಧಿವಿಧಾನ ಕೈಗೊಂಡರು. </p>.<p>ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಇದ್ದರು.</p>.<p>ಯಲ್ಲಮ್ಮನಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ ಮತ್ತು ಸವದತ್ತಿ ಮಾರ್ಗದ ರಸ್ತೆಗಳಲ್ಲಿ ವಾಹನದಟ್ಟಣೆ ಹೆಚ್ಚಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ</strong>: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಗುರುವಾರ ಜಾತ್ರೆ ನಡೆಯಿತು. ಕರ್ನಾಟಕ, ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರು, ಶ್ರದ್ಧೆಯಿಂದ ಧಾರ್ಮಿಕ ಆಚರಣೆ ಕೈಗೊಂಡರು. </p>.<p>ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಬುಧವಾರ ಯಲ್ಲಮ್ಮ ದೇವಿಯ ಕಂಕಣ ಮಂಗಳಸೂತ್ರ ವಿಸರ್ಜನೋತ್ಸವ ಕಾರ್ಯಕ್ರಮ ನಡೆದಿತ್ತು. ಹೂಲಿಯ ಹಿರೇಮಠದ ಅಜ್ಜಯ್ಯ ಶಾಸ್ತ್ರಿ ವೈದಿಕತ್ವದಲ್ಲಿ ಗುರುವಾರ ಮಹಾಯಜ್ಞ ವಿಧಿವತ್ತಾಗಿ ನೆರವೇರಿತು.</p>.<p>ಯಲ್ಲಮ್ಮ ದೇವಿ ತವರಾದ ಹರಳಕಟ್ಟಿಯಿಂದ ಹಿರಿಯರು ಸೀರೆ, ಕುಪ್ಪಸ, ಬಳೆಗಳು, ಅರಿಸಿಣ, ಕುಂಕುಮ ತಂದು, ಧಾರ್ಮಿಕ ವಿಧಿವಿಧಾನ ಕೈಗೊಂಡರು. </p>.<p>ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಇದ್ದರು.</p>.<p>ಯಲ್ಲಮ್ಮನಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ ಮತ್ತು ಸವದತ್ತಿ ಮಾರ್ಗದ ರಸ್ತೆಗಳಲ್ಲಿ ವಾಹನದಟ್ಟಣೆ ಹೆಚ್ಚಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>