ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಹಾಗೂ ಕೆಎಲ್ಇ ಸಂಸ್ಥೆ ಸಹಯೋಗದಲ್ಲಿ ವೀರಶೈವ ಲಿಂಗಾಯತ ವಧು ವರ ಅನ್ವೇಷಣ ಕೇಂದ್ರವು ಏ. 12ರಂದು ಇಲ್ಲಿನ ಜೆಎನ್ಎಂಸಿಯ ಡಾ.ಜೀರಗೆ ಸಭಾಂಗಣದಲ್ಲಿ ಆಯೋಜಿಸಿದ್ದ ವಧು–ವರ, ಪಾಲಕರ ಸಮಾವೇಶವನ್ನು ಕೊರೊನಾ ವೈರಾಣು ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಅನ್ವೇಷಣ ಕೇಂದ್ರದ ಅಧ್ಯಕ್ಷ ಡಾ.ಎಫ್.ವಿ. ಮಾನ್ವಿ ತಿಳಿಸಿದ್ದಾರೆ.