‘ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಬೆಳೆ ಜಲಾವೃತಗೊಂಡಿವೆ. ಒಂದು ವಾರದಲ್ಲಿ ಜಂಟಿ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿ ಕಲೆ ಹಾಕಲಾಗುವುದು. 37 ಸೇತುವೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಖಾನಾಪುರ ತಾಲ್ಲೂಕಿನ ಎರಡು ಸೇತುವೆ ಹೊರತುಪಡಿಸಿ ಉಳಿದ ಕಡೆ ಪರ್ಯಾಯ ಮಾರ್ಗಗಳಿವೆ. ಪ್ರವಾಹದಿಂದ ಬಾಧಿತವಾದ ಗ್ರಾಮಗಳಲ್ಲಿನ ಜನರನ್ನು ರಕ್ಷಿಸಿ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಆಸರೆ ಒದಗಿಸಲಾಗಿದೆ’ ಎಂದಿದ್ದಾರೆ.