<p>ಎಂ.ಕೆ.ಹುಬ್ಬಳ್ಳಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಾರ್ವಜನಿಕರು ಕಡ್ಡಾಯವಾಗಿ ಮೂಲದಲ್ಲೇ ನಾಲ್ಕು ತರನಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕೆಂದು ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಶಂಕರ ಮಾಸ್ತಿಹೊಳಿಮಠ ತಿಳಿಸಿದ್ದಾರೆ.</p>.<p>ಪ್ರಕಟಣೆ ನೀಡಿರುವ ಅವರು, ಕೇಂದ್ರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಏ.1ರಿಂದ ಜಾರಿಗೆ ತಂದಿರುವ ‘ಘನತ್ಯಾಜ್ಯ ವಸ್ತು ನಿರ್ವಹಣೆ’ ನಿಯಮದನ್ವಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು, ವ್ಯಾಪಾರಸ್ಥರು, ಹೊಟೇಲ್ ಮತ್ತು ಬಾರ್ ರೆಸ್ಟೋರೆಂಟ್ ಸೇರಿ ಎಲ್ಲ ಸಾರ್ವಜನಿಕರು ಈ ಸೂಚನೆ ಪಾಲಿಸಬೇಕು. ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಕಾಳಜಿ (ಅಪಾಯಕಾರಿ) ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ ನೀಡಬೇಕೆಂದು ತಿಳಿಸಿದ್ದಾರೆ.</p>.<p>ಇದಕ್ಕೆ ತಪ್ಪಿದ್ದಲ್ಲಿ ಎಸ್ಡಬ್ಲ್ಯೂ ನಿಯಮ-2026ರಂತೆ ದಂಡ ವಿಧಿಸುವುದರ ಜೊತೆಗೆ ಪಟ್ಟಣ ಪಂಚಾಯಿತಿಯಿಂದ ಒದಗಿಸಲಾಗುವ ಮೂಲ ಸೌಕರ್ಯಗಳನ್ನು ಕಡಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಚೇರಿ ಸಂರ್ಪಕಿಸಬಹುದು ಎಂದು ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-21-820361423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಂ.ಕೆ.ಹುಬ್ಬಳ್ಳಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಾರ್ವಜನಿಕರು ಕಡ್ಡಾಯವಾಗಿ ಮೂಲದಲ್ಲೇ ನಾಲ್ಕು ತರನಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕೆಂದು ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಶಂಕರ ಮಾಸ್ತಿಹೊಳಿಮಠ ತಿಳಿಸಿದ್ದಾರೆ.</p>.<p>ಪ್ರಕಟಣೆ ನೀಡಿರುವ ಅವರು, ಕೇಂದ್ರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಏ.1ರಿಂದ ಜಾರಿಗೆ ತಂದಿರುವ ‘ಘನತ್ಯಾಜ್ಯ ವಸ್ತು ನಿರ್ವಹಣೆ’ ನಿಯಮದನ್ವಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು, ವ್ಯಾಪಾರಸ್ಥರು, ಹೊಟೇಲ್ ಮತ್ತು ಬಾರ್ ರೆಸ್ಟೋರೆಂಟ್ ಸೇರಿ ಎಲ್ಲ ಸಾರ್ವಜನಿಕರು ಈ ಸೂಚನೆ ಪಾಲಿಸಬೇಕು. ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಕಾಳಜಿ (ಅಪಾಯಕಾರಿ) ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ ನೀಡಬೇಕೆಂದು ತಿಳಿಸಿದ್ದಾರೆ.</p>.<p>ಇದಕ್ಕೆ ತಪ್ಪಿದ್ದಲ್ಲಿ ಎಸ್ಡಬ್ಲ್ಯೂ ನಿಯಮ-2026ರಂತೆ ದಂಡ ವಿಧಿಸುವುದರ ಜೊತೆಗೆ ಪಟ್ಟಣ ಪಂಚಾಯಿತಿಯಿಂದ ಒದಗಿಸಲಾಗುವ ಮೂಲ ಸೌಕರ್ಯಗಳನ್ನು ಕಡಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಚೇರಿ ಸಂರ್ಪಕಿಸಬಹುದು ಎಂದು ಅವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-21-820361423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>