<p>ಹುಕ್ಕೇರಿ: ಕಾಂಗ್ರೆಸ್ ಪಕ್ಷವು ಬಡವರ, ದೀನದಲಿತರ ಮತ್ತು ರೈತರ ಪರವಿದ್ದು, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮಹಿಳಾ ಸಬಲೀಕರಣ ಮಾಡುವ ಜತೆಗೆ ಸಾಮಾನ್ಯರ ಹಿತಕಾಪಾಡುವಲ್ಲಿ ಯಶಸ್ಸು ಕಂಡಿದೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p>.<p>ತಾಲ್ಲೂಕಿನ ಘೋಡಗೇರಿ ಗ್ರಾಮದ ಶಿವಾನಂದ ಮಠ, ವಿರಕ್ತಮಠ ಮತ್ತು ಗಜಲಿಂಗೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾತನಾಡಿದರು.</p>.<p>ಘೋಡಗೇರಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡಿದಾಗ, ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರ ವಾತಾವರಣವಿದ್ದು, ಸಂಪೂರ್ಣ ಬೆಂಬಲ ಸಿಗುವ ಆಶಯ ವ್ಯಕ್ತಪಡಿಸಿದರು.</p>.<p><strong>ಭೇಟಿ:</strong> ಘೋಡಗೇರಿ ಗ್ರಾಮದ ಶಿವಾನಂದ ಮಠ, ವಿರಕ್ತಮಠ ಮತ್ತು ಗಜಲಿಂಗೇಶ್ವರ ದೇವಸ್ಥಾನ, ದರ್ಗಾಕ್ಕೆ ಜಾರಕಿಹೊಳಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಮಠದಲ್ಲಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು.</p>.<p>ಮಾಜಿ ಸಚಿವ ಶಶಿಕಾಂತ ನಾಯಿಕ, ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ಬಸವರಾಜ ಮಟಗಾರ್, ಮುಖಂಡರಾದ ದುಂಡನಗೌಡ ಪಾಟೀಲ್, ಅಶೋಕ ಅಂಕಲಗಿ, ಪಿಕೆಪಿಎಸ್ ಅಧ್ಯಕ್ಷ ಬಾಬು ಅಂಕಲಗಿ, ಶ್ರೀಕಾಂತ ಭೂಷಿ, ವಿಶಾಲ ಪೂಜಾರಿ, ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ಕಾಂಗ್ರೆಸ್ ಪಕ್ಷವು ಬಡವರ, ದೀನದಲಿತರ ಮತ್ತು ರೈತರ ಪರವಿದ್ದು, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮಹಿಳಾ ಸಬಲೀಕರಣ ಮಾಡುವ ಜತೆಗೆ ಸಾಮಾನ್ಯರ ಹಿತಕಾಪಾಡುವಲ್ಲಿ ಯಶಸ್ಸು ಕಂಡಿದೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.</p>.<p>ತಾಲ್ಲೂಕಿನ ಘೋಡಗೇರಿ ಗ್ರಾಮದ ಶಿವಾನಂದ ಮಠ, ವಿರಕ್ತಮಠ ಮತ್ತು ಗಜಲಿಂಗೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾತನಾಡಿದರು.</p>.<p>ಘೋಡಗೇರಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡಿದಾಗ, ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರ ವಾತಾವರಣವಿದ್ದು, ಸಂಪೂರ್ಣ ಬೆಂಬಲ ಸಿಗುವ ಆಶಯ ವ್ಯಕ್ತಪಡಿಸಿದರು.</p>.<p><strong>ಭೇಟಿ:</strong> ಘೋಡಗೇರಿ ಗ್ರಾಮದ ಶಿವಾನಂದ ಮಠ, ವಿರಕ್ತಮಠ ಮತ್ತು ಗಜಲಿಂಗೇಶ್ವರ ದೇವಸ್ಥಾನ, ದರ್ಗಾಕ್ಕೆ ಜಾರಕಿಹೊಳಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಮಠದಲ್ಲಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು.</p>.<p>ಮಾಜಿ ಸಚಿವ ಶಶಿಕಾಂತ ನಾಯಿಕ, ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ಬಸವರಾಜ ಮಟಗಾರ್, ಮುಖಂಡರಾದ ದುಂಡನಗೌಡ ಪಾಟೀಲ್, ಅಶೋಕ ಅಂಕಲಗಿ, ಪಿಕೆಪಿಎಸ್ ಅಧ್ಯಕ್ಷ ಬಾಬು ಅಂಕಲಗಿ, ಶ್ರೀಕಾಂತ ಭೂಷಿ, ವಿಶಾಲ ಪೂಜಾರಿ, ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>