<p>ಹುಕ್ಕೇರಿ: ‘ಮುಸ್ಲಿಮರ ತ್ಯಾಗ ಮತ್ತು ಬಲಿದಾನದ ಸಂಕೇತವೇ ಬಕ್ರೀದ್’ ಎಂದು ಪಟ್ಟಣದ ಹನ್ನೊಂದು ಜಮಾತ ಅಧ್ಯಕ್ಷ ಸಲಿಂ ನದಾಫ್ ಹೇಳಿದರು.</p>.<p>ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಮಾತನಾಡಿದರು.</p>.<p>‘ಇಸ್ಲಾಂ ಧರ್ಮದಲ್ಲಿ ಪ್ರವಾದಿ ಇಬ್ರಾಹಿಂ ಅಲ್ಲಾಹುನಿಗಾಗಿ ಹೆಂಡತಿ, ಮಗುವನ್ನು ತ್ಯಾಗ ಮಾಡಿದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಅಲ್ಲಾನ ಪ್ರೀತಿಗಾಗಿ ಭೂಲೋಕದ ಅಕ್ರಮ ತ್ಯಾಗ ಮಾಡುವಂತೆ ನಮ್ಮಲ್ಲಿಯ ಅಹಂ ಅನ್ನು ಬಲಿಕೊಡುವಂತೆ ಬಕ್ರೀದ್ ಆಚರಿಸಲಾಗುತ್ತಿದೆ’ ಎಂದರು.</p>.<p>ಮುಖಂಡ ಇರ್ಷಾದ್ ಮೊಕಾಶಿ ಮಾತನಾಡಿ, ‘ಎಲ್ಲ ಧರ್ಮೀಯರು ಶಾಂತಿ, ಸಹಬಾಳ್ವೆಯಿಂದ ಬದುಕುವಂತೆ ಪ್ರಾರ್ಥಿಸಲಾಗಿದೆ’ ಎಂದರು.</p>.<p>ಪಟ್ಟಣದ ಹೊರವಲಯದ ಅರ್ಜುನವಾಡ ರಸ್ತೆ ಪಕ್ಕದ ಈದ್ಗಾ ಮೈದಾನದಲ್ಲಿ ಹನ್ನೂಂದು ಜಮಾತ ಮತ್ತು ಅಂಜುಮನ್ ಕಮಿಟಿ ಸದಸ್ಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಪಟ್ಟಣದ ಜುಮ್ಮಾ ಮಸೀದಿ, ಮಹಮ್ಮದಿಯಾ ಮಸೀದಿ, ಗಜಬಾರವಾಡಿ ಮಸೀದಿ, ಜಾಮಾ ಮಸೀದಿ ಸೇರಿದಂತೆ ತಾಲ್ಲೂಕಿನ ಪಾಶ್ಚಾಪುರ, ನೇರ್ಲಿ, ಸುಲ್ತಾನಪುರ ಸೇರಿ ವಿವಿಧ ಗ್ರಾಮಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ಜರುಗಿದವು.</p>.<p>ಬಾಗವಾನ್, ಕಬೀರ ಮಲಿಕ್, ಸಲಿಂ ಕಳಾವಂತ, ಶಬ್ಬೀರ ಸನದಿ, ನಾಶೀರ್ ಸುತಾರ, ಕೇಸರ್ ಮೊಕಾಶಿ, ಜಾವೀದ ನದಾಫ್, ಅಷರಫ್ ಖಾನಜಾದೆ, ಡಿ.ಆರ್.ಖಾಜಿ, ರಾಜು ಮುಜಾವರ್, ಅಲಂ ಮಕಾನದಾರ್, ಫಾರೂಕ ಮುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-21-76631835</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ‘ಮುಸ್ಲಿಮರ ತ್ಯಾಗ ಮತ್ತು ಬಲಿದಾನದ ಸಂಕೇತವೇ ಬಕ್ರೀದ್’ ಎಂದು ಪಟ್ಟಣದ ಹನ್ನೊಂದು ಜಮಾತ ಅಧ್ಯಕ್ಷ ಸಲಿಂ ನದಾಫ್ ಹೇಳಿದರು.</p>.<p>ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ್ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಮಾತನಾಡಿದರು.</p>.<p>‘ಇಸ್ಲಾಂ ಧರ್ಮದಲ್ಲಿ ಪ್ರವಾದಿ ಇಬ್ರಾಹಿಂ ಅಲ್ಲಾಹುನಿಗಾಗಿ ಹೆಂಡತಿ, ಮಗುವನ್ನು ತ್ಯಾಗ ಮಾಡಿದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಅಲ್ಲಾನ ಪ್ರೀತಿಗಾಗಿ ಭೂಲೋಕದ ಅಕ್ರಮ ತ್ಯಾಗ ಮಾಡುವಂತೆ ನಮ್ಮಲ್ಲಿಯ ಅಹಂ ಅನ್ನು ಬಲಿಕೊಡುವಂತೆ ಬಕ್ರೀದ್ ಆಚರಿಸಲಾಗುತ್ತಿದೆ’ ಎಂದರು.</p>.<p>ಮುಖಂಡ ಇರ್ಷಾದ್ ಮೊಕಾಶಿ ಮಾತನಾಡಿ, ‘ಎಲ್ಲ ಧರ್ಮೀಯರು ಶಾಂತಿ, ಸಹಬಾಳ್ವೆಯಿಂದ ಬದುಕುವಂತೆ ಪ್ರಾರ್ಥಿಸಲಾಗಿದೆ’ ಎಂದರು.</p>.<p>ಪಟ್ಟಣದ ಹೊರವಲಯದ ಅರ್ಜುನವಾಡ ರಸ್ತೆ ಪಕ್ಕದ ಈದ್ಗಾ ಮೈದಾನದಲ್ಲಿ ಹನ್ನೂಂದು ಜಮಾತ ಮತ್ತು ಅಂಜುಮನ್ ಕಮಿಟಿ ಸದಸ್ಯರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಪಟ್ಟಣದ ಜುಮ್ಮಾ ಮಸೀದಿ, ಮಹಮ್ಮದಿಯಾ ಮಸೀದಿ, ಗಜಬಾರವಾಡಿ ಮಸೀದಿ, ಜಾಮಾ ಮಸೀದಿ ಸೇರಿದಂತೆ ತಾಲ್ಲೂಕಿನ ಪಾಶ್ಚಾಪುರ, ನೇರ್ಲಿ, ಸುಲ್ತಾನಪುರ ಸೇರಿ ವಿವಿಧ ಗ್ರಾಮಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ಜರುಗಿದವು.</p>.<p>ಬಾಗವಾನ್, ಕಬೀರ ಮಲಿಕ್, ಸಲಿಂ ಕಳಾವಂತ, ಶಬ್ಬೀರ ಸನದಿ, ನಾಶೀರ್ ಸುತಾರ, ಕೇಸರ್ ಮೊಕಾಶಿ, ಜಾವೀದ ನದಾಫ್, ಅಷರಫ್ ಖಾನಜಾದೆ, ಡಿ.ಆರ್.ಖಾಜಿ, ರಾಜು ಮುಜಾವರ್, ಅಲಂ ಮಕಾನದಾರ್, ಫಾರೂಕ ಮುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-21-76631835</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>